5:11 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

16/04/2025, 11:45

ಪುತ್ತೂರು(reporterkarnataka.com): ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚಿಸಲಾದ ಭಾರತೀಯ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ ಎಂಬಿತ್ಯಾದಿ ವಿಚಾರಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನವನ್ನು ಗೌರವಿಸುವುದು ಹಾಗೂ ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಅವರು ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಆಯೋಜಿಸಿದ ‘ಅಂಬೇಡ್ಕರ್ ಜಯಂತಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿಯಾದ ಡಾ||ಚಂದ್ರಶೇಖರ ಕೆ. ಅವರು ಮಾತನಾಡುತ್ತಾ ” ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳು ಎರಡನ್ನೂ ಕೊಟ್ಟಿದೆ. ನಾವು ಹಕ್ಕುಗಳನ್ನು ಹೇಗೆ ಬಯಸುತ್ತೇವೆಯೋ ಅದೇ ರೀತಿ ಕರ್ತವ್ಯಗಳನ್ನು ಪಾಲಿಸುವುದು ಕೂಡ ಅಗತ್ಯ “ಎಂದು ಹೇಳಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
‘ಅಂಬೇಡ್ಕರ್ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಎನ್ಎಸ್ಎಸ್ ಸ್ವಯಂಸೇವಕಿಯರಾದ ಪುಣ್ಯ, ಗಾಯತ್ರಿ, ಲವಿಕಾ ಇವರು ಪ್ರಬಂಧ ಮಂಡನೆ ಮಾಡಿದರು.
ಗ್ರೀಷ್ಮ ಮತ್ತು ತಂಡದವರು ಪ್ರಾರ್ಥಿಸಿ, ಎನ್ಎಸ್ಎಸ್ ಘಟಕ ನಾಯಕಿ ಅರ್ಚನಾ ಕೆ. ಅವರು ಸ್ವಾಗತಿಸಿದರು. ವಿಷ್ಣುಜಿತ್ ಎಂ. ಅವರು ವಂದಿಸಿದರು. ಘಟಕ ನಾಯಕಿ ಕಾವ್ಯ ಎಚ್. ರಾವ್ ಅವರು ನಿರೂಪಿಸಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪಾ ಎನ್., ಘಟಕ ನಾಯಕ ಕೆವಿನ್, ಕಾರ್ಯದರ್ಶಿ ನಿರಂಜನ್, ಉಪನ್ಯಾಸಕರಾದ ಹರ್ಷಿತ್ ಹಾಗೂ ಪೃಥ್ವಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು