9:43 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಸೋಲಾಪುರ ಚಾದರ, ಸಿಹಿ ತಿಂಡಿ ವಿತರಣೆ

21/08/2022, 19:49

ಮಂಗಳೂರು(reporterkarnataka.com):ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಇನ್ಫೆಂಟ್ ಮೇರಿ ಕಾನ್ವೆಂಟಿನ ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಆಗಸ್ಟ್ 17ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸೋಲಾಪುರ ಚಾದರ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ ಮಾತನಾಡಿ, “ಸಮಾಜ ಸೇವೆ ಮಾಡುವಲ್ಲಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ ಯಶಸ್ವಿಯಾಗಿದೆ”, ಗಳಿಸಿದ್ದಲ್ಲಿ ಒಂದು ಪಾಲನ್ನು ಸಮಾಜಕ್ಕೆ ನೀಡಬೇಕು ಎನ್ನುವ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಫೆರ್ನಾಂಡಿಸ್‌ರವರ ಕಲ್ಪನೆಯನ್ನು ಶ್ಲಾಘಿಸಿದರು. 

ಅತಿಥಿ ನಿವೃತ್ತ ಹಿರಿಯ ಶ್ರೇಣಿ ಅಧಿಕಾರಿ ಸಿಪ್ರಿಯನ್ ಪಿಂಟೋ ಅವರು ಮಾತನಾಡಿ, ಮುಂದೆಯೂ ಸಹಕಾರಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಆಶಿಸಿದರು. 

ಇನ್ಫೆಂಟ್ ಮೇರಿ ಕಾನ್ವೆಂಟಿನ ಸುಪೀರಿಯರ್ ಸಿ| ಸಿಲ್ವಿಯಾರವರು ಸಹಕಾರಿಯ ಬೆಳವಣಿಗೆಗೆ ಶುಭ ಹಾರೈಸಿದರು.  

ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ ಸೋಜ ಅವರು ಮಾತನಾಡುತ್ತಾ, ನಮ್ಮ ಸಹಕಾರಿ 9 ಜಿಲ್ಲೆಗಳಲ್ಲಿ, 111 ಶಾಖೆಗಳ ಮೂಲಕ ಕರ್ತವ್ಯ ನಿರ್ವಹಿಸಿದ್ದು ಇಂತಹ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ನಮಗೆಲ್ಲರಿಗೂ ಸಂತಸದ ವಿಚಾರ, ಇದಕ್ಕೆಲ್ಲಾ ಮೂಲ ಕಾರಣ ನಮ್ಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಫೆರ್ನಾಂಡಿಸ್‌ರವರು, ಅವರ ಸಹಕಾರವಿಲ್ಲದೆ ಸಂಸ್ಥೆ ಇಂತಹ ತೀರ್ಮಾನ ಕೈಗೊಳ್ಳಲು ಅಸಾಧ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 


ಶಾಖಾ ವ್ಯವಸ್ಥಾಪಕರಾದ ಪ್ರಜ್ವಲ್ ಜೆರೋಮ್ ಫ್ರೊಂಟೇರೊ, ಸಮಾಜ ಸೇವಕರಾದ ಆಸ್ಟನ್ ಡಿ ಕ್ಹುನಾ, ಹುಸೈನ್, ಹಬೀಬುಲ್ಲಾ ಹಾಗೂ ವಲೆನ್ಸಿಯಾ ಶಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮರಿಯ ನಿಲಯದ ನಿವಾಸಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪೂರ್ಣಶ್ರೀ ಸ್ವಾಗತಿಸಿದರು.

ರೀಮಾ ಲೂವಿಸ್ ವಂದಿಸಿದರು. ಎಲ್ವಿಟಾ ರೀಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು