2:25 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಮೃತ ಸ್ವಸಹಾಯ ಕಿರು ಉದ್ದಿಮೆಗಾಗಿ ಮಹಿಳೆಯರಿಗೆ 1.85 ಕೋಟಿ ಬಿಡುಗಡೆ

22/04/2022, 20:15

ಮಂಗಳೂರು(reporterkarnataka.com): ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ ಜಿಲ್ಲೆಗೆ 1.85 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಅದನ್ನು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರು ತಮ್ಮ ಉದ್ದಿಮೆಗಳಿಗೆ ಮೂಲ ಬಂಡವಾಳವನ್ನಾಗಿ ಬಳಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕರೆ ನೀಡಿದರು.

ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ವಸಹಾಯ ಸಂಘಗಳಿಗೆ ಚೆಕ್ ವಿತರಿಸಿ ಮಾತನಾಡಿದರು.

ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ 185 ಸ್ವಸಹಾಯ ಗುಂಪುಗಳನ್ನು ಆಯ್ಕೆ ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮೊದಲಾಗಿ ಚೆಕ್ ವಿತರಿಸುತ್ತಿದೆ. ಗುಂಪುಗಳು ತಾವು ಪಡೆದ ಬಂಡವಾಳವನ್ನು ಪರಿಣಾಮಕಾರಿಯಾಗಿ ಬಳಸಬೇಕು. ಉಭಯ ಜಿಲ್ಲೆಯಲ್ಲಿ ಮಹಿಳಾ ಜಾಗೃತಿ ದೊಡ್ಡ ಪ್ರಮಾಣದಲ್ಲಿ ಇದ್ದು, ಇದರಿಂದ ಸಮಾಜದಲ್ಲಿಯೂ ಜಾಗೃತಿ ಉಂಟಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಜಿಲ್ಲೆ ಯಶಸಿಯಾಗಿದೆ, ಮಹಿಳೆಯರನ್ನು ಮುಖ್ಯವಾಹಿನಿಗೆ ತರುವಲ್ಲಿ ಯೋಜನೆ ಹೆಚ್ಚು ಮಹತ್ವದ್ದಾಗಿದೆ. ನಗರ ಪ್ರದೇಶದ ಸ್ವಸಹಾಯ ಗುಂಪುಗಳಿಗೂ ಈ ಯೋಜನೆ ಅನ್ವಯಿಸಬೇಕಿದೆ ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಜಿಲ್ಲೆಯ 185 ಸ್ವ ಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ.ಗಳಂತೆ 1.85 ಕೋಟಿ ರೂ. ಬೀಜಧನ (ಕ್ಯಾಪಿಟಲ್ ಫಂಡ್) ವಿತರಿಸಲಾಗಿದೆ. ಹಾಳೆ ತಟ್ಟೆ ತಯಾರಿಕೆ, ಅಣಬೆ ಕೃಷಿ, ಬೇಕರಿ ತಿಂಡಿ ತಯಾರಿ, ಸೋಪ್ ಆಯಿಲ್, ಫಿನಾಯಿಲ್ ತಯಾರಿಕೆ ಮೊದಲಾದ ಚಟುವಟಿಕೆಗಳನ್ನು ಈ ಗುಂಪುಗಳು ಕೈಗೊಂಡಿದ್ದು, ಅವುಗಳಿಗೆ ಉತ್ತೇಜನ ನೀಡಲು ಈ ಸಹಾಯಧನ ವಿತರಿಸಲಾಗಿದೆ. ಇದನ್ನು ಮರುಪಾವತಿ ಮಾಡಬೇಕಾಗಿಲ್ಲ. ಯಾವ ಉದ್ದೇಶಕ್ಕೆ ಪ್ರಸ್ತಾವನೆ ಸಲ್ಲಿಸಿ ಪಡೆಯಲಾಗಿದೆಯೋ ಅದಕ್ಕೆ ಬಳಸಬೇಕು. ಜಿಲ್ಲೆಯಲ್ಲಿ 65 ಉತ್ಪನ್ನಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಮುಖ್ಯಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸಹಾಯಕ ಆಯುಕ್ತ ಮದನ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಾಪಾ ಭೋವಿ ಉಪಸ್ಥಿತರಿದ್ದರು.


ಸಹಾಯಕ ಯೋಜನಾಧಿಕಾರಿ ಸರೋಜಿನಿ ವಂದಿಸಿದರು. ನೂರಾರು ಸಂಖ್ಯೆಯ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು