4:42 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ

07/01/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರ್ವೀನ್ ಗೆ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದೆ. ಆಂಬುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಜೊತೆ ಸೇರಿ ಆಂಬುಲೆನ್ಸ್ ಚಾಲಕ ಆರೀಫ್ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಡೆಲವರಿ ಬಳಿಕ ತಾಯಿ-ಮಗು ಆರೋಗ್ಯವಾಗಿದ್ದು ಹೆರಿಗೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನದಲ್ಲಿ ಇದು ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣ. ಮೂರರಲ್ಲಿ ಎರಡು ಪ್ರಕರಣದಲ್ಲಿ ಆಂಬುಲೆನ್ಸ್ ಚಾಲಕ ಹಾಗೂ ಗರ್ಭಿಣಿಯ ಜೊತೆಗಿದ್ದವರೇ ಹೆರಿಗೆ ಮಾಡಿಸಿದ್ದಾರೆ. ಆದರೆ, ಸ್ಥಳಿಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರುತ್ತೆ. ಹೆರಿಗೆ ದಿನಾಂಕದ ಮೊದಲು ಅಂಗನವಾಡಿ ಕಾರ್ಯಕರ್ತರ ಮೂಲಕ ಅವರಿಗೆ ಎಚ್ಚರಿಕೆ ಕೊಡಿಸಬಹುದು. ಆದರೆ, ಮಹಿಳೆಯರು ಹೆರಿಗೆ ನೋವು ಬರುವವರೆಗೆ ಮನೆಯಲ್ಲೇ ಇದ್ದರೆ ನಾಳೆ ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು. ಆರೋಗ್ಯ ಅಧಿಕಾರಿಗಳು ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು