12:27 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ

07/01/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರ್ವೀನ್ ಗೆ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದೆ. ಆಂಬುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಜೊತೆ ಸೇರಿ ಆಂಬುಲೆನ್ಸ್ ಚಾಲಕ ಆರೀಫ್ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಡೆಲವರಿ ಬಳಿಕ ತಾಯಿ-ಮಗು ಆರೋಗ್ಯವಾಗಿದ್ದು ಹೆರಿಗೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನದಲ್ಲಿ ಇದು ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣ. ಮೂರರಲ್ಲಿ ಎರಡು ಪ್ರಕರಣದಲ್ಲಿ ಆಂಬುಲೆನ್ಸ್ ಚಾಲಕ ಹಾಗೂ ಗರ್ಭಿಣಿಯ ಜೊತೆಗಿದ್ದವರೇ ಹೆರಿಗೆ ಮಾಡಿಸಿದ್ದಾರೆ. ಆದರೆ, ಸ್ಥಳಿಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರುತ್ತೆ. ಹೆರಿಗೆ ದಿನಾಂಕದ ಮೊದಲು ಅಂಗನವಾಡಿ ಕಾರ್ಯಕರ್ತರ ಮೂಲಕ ಅವರಿಗೆ ಎಚ್ಚರಿಕೆ ಕೊಡಿಸಬಹುದು. ಆದರೆ, ಮಹಿಳೆಯರು ಹೆರಿಗೆ ನೋವು ಬರುವವರೆಗೆ ಮನೆಯಲ್ಲೇ ಇದ್ದರೆ ನಾಳೆ ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು. ಆರೋಗ್ಯ ಅಧಿಕಾರಿಗಳು ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು