3:26 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್

11/11/2023, 18:22

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದ್ರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ, ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ರು. ಆದ್ರೆ ಕೊಟ್ಟಿಗೆಹಾರ ಅಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.


ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು 7 ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ. ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ. ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500/- ಫೈನ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು