12:31 PM Monday25 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಅಮೆರಿಕದ ನೆಲದಿಂದ ‘ಶಕುಂತಲಾ’ ಯಶಸ್ವಿ ಉಡಾವಣೆ: ಕಾಫಿನಾಡಿನ ಯುವ ವಿಜ್ಞಾನಿಯ ಅದ್ಬುತ ಸಾಧನೆ

06/04/2022, 12:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತನ್ನದೇ ಸ್ವಂತ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿ ಉಪಗ್ರಹವನ್ನು ತಯಾರಿಸಿ ಅಮೆರಿಕದ ಸ್ಪೆಸೆಕ್ಸ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶವೇ ಹೆಮ್ಮೆಪಡುವಂತ ಸಾಧನೆಯನ್ನು ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ಯುವಕ ಅವೇಜ್‌ ಅಹಮದ್‌ ಮಾಡಿದ್ದಾರೆ. 

ಆಲ್ದೂರು ಜನತೆ ತಮ್ಮ ಊರಿನ ಯುವಕನ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ

ಅವೇಜ್‌ ಅಹಮದ್‌ ಅವರ ಸಂಶೋಧನೆಯ ಉಪಗ್ರಹ ಬೇರೆ ಎಲ್ಲಾ ಉಪಗ್ರಹಗಳಿಗಿಂತ ಶೇ.50 ಹೆಚ್ಚು ಡೇಟಾವನ್ನು ಬಿಡುಗಡೆಗೊಳಿಸುತ್ತದೆ. ಈ ಉಪಗ್ರಹ ಭೂಮಿಯ ಚಲನವಲನದ ಫೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತದೆ.

ಇಸ್ರೋದಿಂದಲೇ ತಮ್ಮ ಪ್ರಥಮ ಉಪಗ್ರಹ ಆನಂದ್‌ ಅನ್ನು ಉಡಾವಣೆ ಮಾಡುವ ಮಹತ್ವಕಾಂಕ್ಷೆ ಅವೇಜ್‌ ಅವರದಾಗಿತ್ತು. ಆದರೆ ಇಸ್ರೋದಲ್ಲಿ ಉಡಾವಣೆಗೆ ಡೇಟ್‌ ಸಿಗದ ಕಾರಣ ತಮ್ಮದೇ ನಿರ್ಮಾಣದ ಮತ್ತೂಂದು ಉಪಗ್ರಹ ಶಕುಂತಲಾವನ್ನು ಅಮೆರಿಕಾದ ಸ್ಪೇಸೆಕ್ಸ್ ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಶೀಘ್ರದಲ್ಲೇ ಇಸ್ರೋದಿಂದ ತಮ್ಮ ಮೊದಲ ನಿರ್ಮಾಣದ ಉಪಗ್ರಹವನ್ನು ಉಡಾವಣೆ ಮಾಡುವ ಕನಸು ಶೀಘ್ರದಲ್ಲೇ ನನಸಾಗಲಿದೆ.

ಅವೇಜ್‌ ಅಹಮದ್‌ ಆಲ್ದೂರಿನ ರಾಯಲ್‌ ಮೆಡಿಕಲ್ಸ್‌ ಮಾಲೀಕ ನದೀಮ್‌ ಅಹಮದ್‌ ಅವರ ಪುತ್ರ. ಆಲ್ದೂರಿನ ರೋಸ್‌ ಬಡ್‌, ಅಕ್ಷರ ಪಬ್ಲಿಕ್‌ ಸ್ಕೂಲ್‌ನಲ್ಲಿ ಪ್ರಾಥಮಿಕ ಹಂತದ ಶಿಕ್ಷಣ ಪಡೆದು ಪ್ರೌಡಶಿಕ್ಷಣವನ್ನು ಆಲ್ದೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಮುಗಿಸಿದರು. ಸಿಇಟಿಯಲ್ಲಿ 477ನೇ ರ್‍ಯಾಂಕ್‌ ಪಡೆದು ಆರ್‌.ವಿ. ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಜೆಇಇ ಪರೀಕ್ಷೆಯಲ್ಲಿ 2000 ರ್‍ಯಾಂಕ್‌ ಪಡೆದು ಭಾರತದ ನಂ.1 ನಿಟ್‌ ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಭಾರತದ ನಂ.1 ಖಾಸಗಿ ಕಾಲೇಜು ಬಿಟ್ಸ್‌-ಪಿಲಾನಿ(ಬಿರ್ಲಾ ಇನ್ಸ್‌ಟಿಟ್ಯೂಟ್‌

ಆಫ್‌ಟೆಕ್ನಾಲಜಿ ಆ್ಯಂಡ್‌ ಸೈನ್ಸ್‌) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಮುಂದುವರಿಸಿದರು.

ಎಂಎಸ್ಸಿ ಮ್ಯಾಥಮೆಟಿಕ್ಸ್‌ ಡಿಗ್ರಿ ಪಡೆದು ಹೊರಬಂದ ಪಿಕ್ಸೆಲ್‌ ಎಂಬ ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿದ್ದಾರೆ.

ಬಾಲ್ಯದಿಂದಲೂ ಬ್ಯಾಹ್ಯಾಕಾಶದ ಬಗ್ಗೆ ಕುತೂಹಲ, ಆಸಕ್ತಿ ಬೆಳೆಸಿಕೊಂಡಿದ್ದು ಎಲನ್‌ ಮಾಸ್ಕ್ನ ಎರೋಸ್ಪೇಸ್‌ ಕಂಪೆನಿ “ಸ್ಪೆಸೆಕ್ಸ್‌’ ನಿಂದ ಪ್ರಭಾವಿತರಾದ ಅವೇಜ್‌ ಭಾರತದಲ್ಲಿಯೂ ಇದೇ ರೀತಿಯ ಕಂಪೆನಿ ಪ್ರಾರಂಭಿಸಬೇಕೆಂಬ ಹೆಬ್ಬಯಕೆ ಇಟ್ಟಿಕೊಂಡು ಇಂದು ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾಂರಭಿಸುವ ಮೂಲಕ ತಮ್ಮ ಕನಸಿಗೆ ರೆಕ್ಕೆ ಕಟ್ಟಿದ್ದಾರೆ. ತಾವು ನಿರ್ಮಿಸಿದ ಖಾಸಗಿ ಉಪಗ್ರಹವನ್ನು ಅಮೆರಿಕದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು