4:46 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಮೆರಿಕದ ಸಾಮ್ರಾಜ್ಯಶಾಹಿತ್ವ ಜಗತ್ತಿನಲ್ಲಿ ಅಶಾಂತಿ, ಹಸಿವಿಗೆ ಕಾರಣ: ಹಿರಿಯ ಚಿಂತಕ‌ ಪ್ರೊ. ರಾಜೇಂದ್ರ ಉಡುಪ

22/02/2026, 22:11

ಮಂಗಳೂರಿನಲ್ಲಿ ಕೆಂಪು ಪುಸ್ತಕ ದಿನಾಚರಣೆ, "ಯು ಎಸ್ ಸಾಮ್ರಾಜ್ಯಶಾಹಿ - ಭಾರತದ ಜನತೆಯ ಶತ್ರು" ಪುಸ್ತಕ ಬಿಡುಗಡೆ

ಮಂಗಳೂರು(reporterkarnataka.com): ಅಮೆರಿಕ ಮತ್ತದರ ಕೂಟ ಜಗತ್ತನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಮಿಲಿಟರಿ ಕಾರ್ಯಾಚರಣೆ, ಹಸ್ತಕ್ಷೇಪ, ಆರ್ಥಿಕ ನೀತಿಗಳ ಮೂಲಕ ಜಗತ್ತಿನಲ್ಲಿ ವ್ಯಾಪಕವಾದ ಹಿಂಸೆ, ಹಸಿವಿಗೆ ಕಾರಣವಾಗಿದೆ. ತನ್ನ ತಾಳಕ್ಕೆ ಕುಣಿಯದ ಹಲವು ದೇಶಗಳ ಚುನಾಯಿತ ಸರಕಾರಗಳನ್ನು ಅಮೆರಿಕಾ ಕೆಡವಿದೆ, ಆಂತರಿಕ ದಂಗೆಗೆ ಪ್ರಚೋದಿಸಿ, ತನ್ನ ಕೈಗೊಂಬೆ ಸರಕಾರಗಳನ್ನು ಸ್ಥಾಪಿಸಿದೆ. ಅಮೆರಿಕನ್ ಸಾಮ್ರಾಜ್ಯಶಾಹಿ ಕೂಟವನ್ನು ಅರ್ಥ ಮಾಡಿಕೊಳ್ಳುವಲ್ಲಿ ಮೂರನೆ ಜಗತ್ತಿನ ದೇಶಗಳ ಜನತೆ ಸೋತಿವೆ. ಎರಡನೇ ಮಹಾಯುದ್ಧದ ತರುವಾಯ ಬ್ರಿಟಿಷ್ ವಸಾಹತುಶಾಹಿಯ ಬದಲಿಗೆ ಅಮೆರಿಕಾ ದೊಡ್ಡಣ್ಣನಾಗಿ ವರ್ತಿಸುತ್ತಿದೆ. ಸೋವಿಯತ್ ಯೂನಿಯನ್ ನ ಕುಸಿತದ ತರುವಾಯ ಅಮೆರಿಕಾ ಲಂಗುಲಗಾಮಿಲ್ಲದೆ ವರ್ತಿಸುತ್ತಿದೆ. ಭಾರತದ ವರ್ತಮಾನದ ಬಿಕ್ಕಟ್ಟುಗಳಲ್ಲಿ ಅಮೆರಿಕಾದ ಪಾತ್ರವನ್ನು ನಿರಾಕರಿಸಲು ಸಾಧ್ಯವಿಲ್ಲ. ಭಾರತದ ಜನತೆಯ ನೈಜ ಶತ್ರುವಾದ ಅಮೆರಿಕನ್ ಸಾಮ್ರಾಜ್ಯಶಾಹಿಯನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗಬೇಕು ಎಂದು ಹಿರಿಯ ಚಿಂತಕ, ಪ್ರೊ. ರಾಜೇಂದ್ರ ಉಡುಪ ಹೇಳಿದರು.


ಅವರು ನಗರದಲ್ಲಿ ಸಿಪಿಐಎಂ ಮಂಗಳೂರು ನಗರ ಸಮಿತಿ ಹಮ್ಮಿಕೊಂಡಿದ್ದ ಕೆಂಪು ಪುಸ್ತಕ ದಿನದಲ್ಲಿ “ಯು ಎಸ್ ಸಾಮ್ರಾಜ್ಯಶಾಹಿ, ಭಾರತದ ಜನತೆಯ ಶತ್ರು” ಪುಸ್ತಕ ಬಿಡುಗಡೆ ಮಾಡಿ ಮಾತಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಸಮುದಾಯ ರಂಗ ಚಳವಳಿಯ ವಾಸುದೇವ ಉಚ್ಚಿಲ ವಹಿಸಿದ್ದರು. ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಪಿಐಎಂ ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಸ್ವಾಗತಿಸಿದರು. ಮಂಗಳೂರು ನಗರ ಉತ್ತರ ಸಮಿತಿಯ ಕಾರ್ಯದರ್ಶಿ ಪ್ರಮೀಳಾ ಕೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು