3:02 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯ ಸೋರಿಕೆ: ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥ

01/08/2025, 22:57

ಮಂಗಳೂರು(reporterkarnataka.com): ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ನಾಲ್ವರಿಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು ಅವರನ್ನು 24 ಗಂಟೆ ಕಾಲ ತೀವ್ರ ನಿಗಾದಲ್ಲಿ ಇರಿಸಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಒಟ್ಟು ಸುಮಾರು 25 ಮಂದಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಂಗಳೂರು ವಿಭಾಗ ಸಹಾಯಕ ಆಯುಕ್ತ ಹರ್ಷವರ್ಧನ್ ಸೂಚನೆಯಂತೆ ಸ್ಥಳಕ್ಕೆ ಮಂಗಳೂರು ತಾಲೂಕು ತಹಸೀಲ್ದಾರ್ ರಮೇಶ್ ಬಾಬು, ಸುರತ್ಕಲ್ ಹೋಬಳಿ ಉಪ ತಹಸೀಲ್ದಾರ್ ನವೀನ್,ಆರ್.ಐ ಪ್ರಸಾದ್, ಗ್ರಾಮ ಕರಣಿಕರಾದ ಅನುಷಾ ಆಗಮಿಸಿ ತುರ್ತು ಕ್ರಮ ಕೈಗೊಂಡಿದ್ದಾರೆ.
ಅಲ್ಲದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಅಗ್ನಿ ಶಾಮಕ ದಳ ಹಾಗೂ ಪಣಂಬೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಘಟಕದಲ್ಲಿ ಸುಮಾರು 200 ಮಂದಿ ಕೆಲಸ ಮಾಡುತ್ತಿದ್ದರು.
ಅನಿಲ ಸೋರಿಕೆಯಿಂದಾಗಿ ಪರಿಸರದಲ್ಲಿ ಸಾಕಷ್ಟು ದುರ್ವಾಸನೆ ಆವರಿಸಿದ್ದು ಕೈಗಾರಿಕಾ ಘಟಕಗಳ ಕಾರ್ಮಿಕರು ಭೀತಿಗೊಂಡು ರಸ್ತೆಗೆ ಓಡಿ ಬಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು