6:45 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ: ವಿಧಾನ ಪರಿಷತ್ ನಲ್ಲಿ ಸಚಿವ ಈಶ್ವರ ಖಂಡ್ರೆ

10/03/2026, 20:00

ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು: ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು.
ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.
ಈ ಎರಡೂ ಪ್ರಕರಣದಲ್ಲಿ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ವಿತರಿಸಲಾಗಿದ್ದು, ವಾರದೊಳಗೆ ಉಳಿಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು