12:45 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ

01/10/2023, 22:51

ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ.
ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಸಿಬ್ಬಂದಿ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ.ಗಳ ಮೌಲ್ಯದ ಕಾಪರ್ ಸಲ್ಫೈಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃಷಿ ಜಾರಿದಳ ಹಾಗೂ ಎಲ್ಲಾ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು