1:56 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ

01/10/2023, 22:51

ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ.
ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಸಿಬ್ಬಂದಿ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ.ಗಳ ಮೌಲ್ಯದ ಕಾಪರ್ ಸಲ್ಫೈಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃಷಿ ಜಾರಿದಳ ಹಾಗೂ ಎಲ್ಲಾ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು