6:20 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ

21/09/2022, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕಾರ್ಯದರ್ಶಿ ಶಿವಕಾಶಿ ಯು.ಆರ್. ಹೇಳಿದರು.

ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಪತ್ರಕರ್ತರಲ್ಲದೇ ಇದ್ದರೂ ಕೂಡ ನಕಲಿ ಪ್ರೆಸ್ ಐಡಿ ಹೊಂದಿರುವುದು ಮತ್ತು ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸಾರ್ವಜನಿಕರು ಪತ್ರಕರ್ತರ ಸಂಘ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದರು. 

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಉದಯಶಂಕರ್, ಸದಸ್ಯರಾದ ಪ್ರಸನ್ನ ಗೌಡಹಳ್ಳಿ, ನಂದೀಶ್ ಬಂಕೇನಹಳ್ಳಿ, ಸೊಮಶೇಖರ್, ಶಾರದಶೇಖರ್, ಆನಂದ್ ಕಣಚೂರು, ವಿಜಯಕುಮಾರ್, ಪ್ರವೀಣ್ ಪೂಜಾರಿ, ಸಂತೋಷ್ ಅತ್ತಿಗೆರೆ, ಪ್ರಕಾಶ್ ಬಿ.ಪಿ, ತನು ಕೊಟ್ಟಿಗೆಹಾರ, ನಯನ ತಳವಾರ, ಅಮರನಾಥ್, ಪ್ರಸನ್ನಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು