1:24 AM Sunday9 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ

21/09/2022, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕಾರ್ಯದರ್ಶಿ ಶಿವಕಾಶಿ ಯು.ಆರ್. ಹೇಳಿದರು.

ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಪತ್ರಕರ್ತರಲ್ಲದೇ ಇದ್ದರೂ ಕೂಡ ನಕಲಿ ಪ್ರೆಸ್ ಐಡಿ ಹೊಂದಿರುವುದು ಮತ್ತು ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸಾರ್ವಜನಿಕರು ಪತ್ರಕರ್ತರ ಸಂಘ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದರು. 

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಉದಯಶಂಕರ್, ಸದಸ್ಯರಾದ ಪ್ರಸನ್ನ ಗೌಡಹಳ್ಳಿ, ನಂದೀಶ್ ಬಂಕೇನಹಳ್ಳಿ, ಸೊಮಶೇಖರ್, ಶಾರದಶೇಖರ್, ಆನಂದ್ ಕಣಚೂರು, ವಿಜಯಕುಮಾರ್, ಪ್ರವೀಣ್ ಪೂಜಾರಿ, ಸಂತೋಷ್ ಅತ್ತಿಗೆರೆ, ಪ್ರಕಾಶ್ ಬಿ.ಪಿ, ತನು ಕೊಟ್ಟಿಗೆಹಾರ, ನಯನ ತಳವಾರ, ಅಮರನಾಥ್, ಪ್ರಸನ್ನಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು