2:01 AM Thursday25 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ

21/09/2022, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕಾರ್ಯದರ್ಶಿ ಶಿವಕಾಶಿ ಯು.ಆರ್. ಹೇಳಿದರು.

ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಪತ್ರಕರ್ತರಲ್ಲದೇ ಇದ್ದರೂ ಕೂಡ ನಕಲಿ ಪ್ರೆಸ್ ಐಡಿ ಹೊಂದಿರುವುದು ಮತ್ತು ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸಾರ್ವಜನಿಕರು ಪತ್ರಕರ್ತರ ಸಂಘ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದರು. 

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಉದಯಶಂಕರ್, ಸದಸ್ಯರಾದ ಪ್ರಸನ್ನ ಗೌಡಹಳ್ಳಿ, ನಂದೀಶ್ ಬಂಕೇನಹಳ್ಳಿ, ಸೊಮಶೇಖರ್, ಶಾರದಶೇಖರ್, ಆನಂದ್ ಕಣಚೂರು, ವಿಜಯಕುಮಾರ್, ಪ್ರವೀಣ್ ಪೂಜಾರಿ, ಸಂತೋಷ್ ಅತ್ತಿಗೆರೆ, ಪ್ರಕಾಶ್ ಬಿ.ಪಿ, ತನು ಕೊಟ್ಟಿಗೆಹಾರ, ನಯನ ತಳವಾರ, ಅಮರನಾಥ್, ಪ್ರಸನ್ನಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು