3:13 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ

21/09/2022, 12:55

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ತುಳು ವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ಕಾರ್ಯಕಮದ ಯಶಸ್ವಿಗಾಗಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದ್ದು ಪುಣಿಂಚಿತ್ತಾಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಂಶೋಧಾನತ್ಮಕ ವಿಷಯಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ಧ್ಯೆಯವಾಗಿದೆ. ಈ ಬಗ್ಗೆ ವಿಚಾರ ಗೋಷ್ಠಿ, ಸಾಹಿತ್ಯ ಗೋಷ್ಠಿ, ಪುವೆಂಪು ಸಮಕಾಲೀನ ಸಾಹಿತಿಗಳ ಸಮ್ಮಿಲನ, ಪುವೆಂಪು ರಚಿತ ನಾಟಕಗಳ ಪ್ರದರ್ಶನ ಹಾಗೂ ಅಭಿಮಾನಿಗಳ ವಿಚಾರ ಮಂಡನೆ,ಪುವೆಂಪು ಸಮ್ಮಾನ್ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಏಕ ದಿನ ಸಮ್ಮೇಳನ ಸರ್ವಾಧ್ಯಕ್ಷರಾಗಿ ಗಲ್ಫ್ ರಾಷ್ಟ್ರದ ತುಳು ಸಂಘಟಕ, ಸಾಹಿತ್ಯ, ಸಾಂಸ್ಕೃತಿಕ ಪ್ರೋತ್ಸಾಹಕ, ಮಾರ್ಗದರ್ಶಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. 

ಈ ಹಿಂದೆ ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೋದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸರ್ವೋತ್ತಮ ಶೆಟ್ಟಿ ಅವರು ಬಳಿಕ ಯುಎಇಯಲ್ಲೂ ತುಳುವೆರೆ ಆಯನೋ ನಡೆಸುವ ಮೂಲಕ ತುಳು ನಾಡು ನುಡಿ ಸಂಸ್ಕೃತಿಯ ಪ್ರೋತ್ಸಾಹಕ್ಕೆ ಕೊಡುಗೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು