5:22 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ

21/09/2022, 12:55

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ತುಳು ವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ಕಾರ್ಯಕಮದ ಯಶಸ್ವಿಗಾಗಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದ್ದು ಪುಣಿಂಚಿತ್ತಾಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಂಶೋಧಾನತ್ಮಕ ವಿಷಯಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ಧ್ಯೆಯವಾಗಿದೆ. ಈ ಬಗ್ಗೆ ವಿಚಾರ ಗೋಷ್ಠಿ, ಸಾಹಿತ್ಯ ಗೋಷ್ಠಿ, ಪುವೆಂಪು ಸಮಕಾಲೀನ ಸಾಹಿತಿಗಳ ಸಮ್ಮಿಲನ, ಪುವೆಂಪು ರಚಿತ ನಾಟಕಗಳ ಪ್ರದರ್ಶನ ಹಾಗೂ ಅಭಿಮಾನಿಗಳ ವಿಚಾರ ಮಂಡನೆ,ಪುವೆಂಪು ಸಮ್ಮಾನ್ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಏಕ ದಿನ ಸಮ್ಮೇಳನ ಸರ್ವಾಧ್ಯಕ್ಷರಾಗಿ ಗಲ್ಫ್ ರಾಷ್ಟ್ರದ ತುಳು ಸಂಘಟಕ, ಸಾಹಿತ್ಯ, ಸಾಂಸ್ಕೃತಿಕ ಪ್ರೋತ್ಸಾಹಕ, ಮಾರ್ಗದರ್ಶಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. 

ಈ ಹಿಂದೆ ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೋದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸರ್ವೋತ್ತಮ ಶೆಟ್ಟಿ ಅವರು ಬಳಿಕ ಯುಎಇಯಲ್ಲೂ ತುಳುವೆರೆ ಆಯನೋ ನಡೆಸುವ ಮೂಲಕ ತುಳು ನಾಡು ನುಡಿ ಸಂಸ್ಕೃತಿಯ ಪ್ರೋತ್ಸಾಹಕ್ಕೆ ಕೊಡುಗೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು