10:28 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ

21/09/2022, 12:55

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ತುಳು ವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ಕಾರ್ಯಕಮದ ಯಶಸ್ವಿಗಾಗಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದ್ದು ಪುಣಿಂಚಿತ್ತಾಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಂಶೋಧಾನತ್ಮಕ ವಿಷಯಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ಧ್ಯೆಯವಾಗಿದೆ. ಈ ಬಗ್ಗೆ ವಿಚಾರ ಗೋಷ್ಠಿ, ಸಾಹಿತ್ಯ ಗೋಷ್ಠಿ, ಪುವೆಂಪು ಸಮಕಾಲೀನ ಸಾಹಿತಿಗಳ ಸಮ್ಮಿಲನ, ಪುವೆಂಪು ರಚಿತ ನಾಟಕಗಳ ಪ್ರದರ್ಶನ ಹಾಗೂ ಅಭಿಮಾನಿಗಳ ವಿಚಾರ ಮಂಡನೆ,ಪುವೆಂಪು ಸಮ್ಮಾನ್ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಏಕ ದಿನ ಸಮ್ಮೇಳನ ಸರ್ವಾಧ್ಯಕ್ಷರಾಗಿ ಗಲ್ಫ್ ರಾಷ್ಟ್ರದ ತುಳು ಸಂಘಟಕ, ಸಾಹಿತ್ಯ, ಸಾಂಸ್ಕೃತಿಕ ಪ್ರೋತ್ಸಾಹಕ, ಮಾರ್ಗದರ್ಶಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. 

ಈ ಹಿಂದೆ ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೋದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸರ್ವೋತ್ತಮ ಶೆಟ್ಟಿ ಅವರು ಬಳಿಕ ಯುಎಇಯಲ್ಲೂ ತುಳುವೆರೆ ಆಯನೋ ನಡೆಸುವ ಮೂಲಕ ತುಳು ನಾಡು ನುಡಿ ಸಂಸ್ಕೃತಿಯ ಪ್ರೋತ್ಸಾಹಕ್ಕೆ ಕೊಡುಗೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು