11:03 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು