1:00 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು