2:59 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಅನಾಥವಾದ ಕುದುರೆಮುಖ ಲೇಬರ್ ಕಾಲೋನಿಯ 60 ಕಾರ್ಮಿಕ ಕುಟುಂಬಗಳು!: ಕುಡಿಯಲು ನೀರೂ ಇಲ್ಲ, ಬೆಳಕಿಗೆ ಕರೆಂಟೂ ಇಲ್ಲ!!

08/08/2023, 15:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಲೆಬರ್ ಕಾಲೋನಿಗೆಯ 60 ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟದಲ್ಲಿದ್ದು, ಅಧಿಕಾರಿಗಳ ಭೇಟಿ ನೀಡಿ ಕಾರ್ಮಿಕರ ನಾಯಿಪಾಡಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಕುಡಿಯೋ ನೀರು, ವಿದ್ಯುತ್ ಸೌಲಭ್ಯವಿಲ್ಲದೆ ಬಡ ಕಾರ್ಮಿಕ ಕುಟುಂಬಗಳು ಜೀವನ ನಡೆಸುತ್ತಿವೆ. ಕುದುರೆಮುಖ ಕಬ್ಬಿಣ ಕಾರ್ಖಾನೆ ಇದ್ದಾಗ ಕೂಲಿ ಮಾಡುತ್ತಿದ್ದ ಕಾರ್ಮಿಕರು
ಕಂಪನಿ ಮುಚ್ಚಿದ ಮೇಲೆ ಅಲ್ಲೇ ವಾಸವಾಗಿದ್ದಾರೆ. ಭಾರೀ ಮಳೆಯಿಂದ ಮನೆಗಳ ಗೋಡೆಗಳು ಬಿದ್ದು ಹೋಗಿವೆ. ಅವರನ್ನೆಲ್ಲ ಕಳಸಕ್ಕೆ ಸ್ಥಳಾಂತರ ಮಾಡಲು ಈಗಾಗಲೇ ಜಾಗ ನೋಡಿದ್ದರೂ ಸ್ಥಳಾಂತರ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಕಾರ್ಮಿಕ ಕುಟುಂಬಗಳು
ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿವೆ.
ತಾಪಂ ಇಓ, ಪಟ್ಟಣ ಪಂಚಾಯ್ತಿ ಚೀಫ್ ಆಫೀಸರ್, ಕಂದಾಯ ಇಲಾಖೆಯ ಅಧಿಕಾರಿಗಳು, ಸಂಸೆ ಹಾಗೂ ಕಳಸ ಗ್ರಾಪಂ ಪಿಡಿಓ ಭೇಟಿ ನೀಡಿದ್ದಾರೆ.


3-4 ದಿನದಲ್ಲಿ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಆದೇಶ ನೀಡಿದ್ದಾರೆ. ಶೀಘ್ರದಲ್ಲೇ ಸ್ಥಳಾಂತರ ಮಾಡುವ ಭರವಸೆಯನ್ನೂ ಅಧಿಕಾರಿಗಳು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು