10:12 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು