2:29 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು