7:03 PM Sunday7 - June 2026
ಬ್ರೇಕಿಂಗ್ ನ್ಯೂಸ್
Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು