5:07 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Mangaluru | 23ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ

20/12/2025, 09:24

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಸಭೆಯಲ್ಲಿ ಇದೇ ಡಿಸಂಬರ್‌ 23ರಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶದ ತಯಾರಿ ಬಗ್ಗೆ ಚರ್ಚಿಸಲಾಯಿತು. ಸಮಾವೇಶಕ್ಕೆ ಬರುವ ಫಲಾನುಭವಿಗಳನ್ನು ಕರೆತರಲು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಕೆಎಸ್‌ ಆರ್‌ ಟಿ ಸಿ ಬಸ್ಸುಗಳ ವ್ಯವಸ್ಥೆ ಮಾಡಿಸುವಂತೆ ಸದಸ್ಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದೇವೇಳೆ ಯುವನಿಧಿಗೆ ನೋಂದಣಿ ಮಾಡಿಕೊಳ್ಳುವ ಉದ್ದೇಶದಿಂದ ಸಮಾವೇಶದಲ್ಲಿ ಸ್ಟಾಲ್‌ ಗಳನ್ನು ಹಾಕಲಾಗುವುದು ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ, ಸಮಿತಿಯ ಸದಸ್ಯ ಮಹೇಶ್‌ ಕುಮಾರ್‌ ಹೊಳ್ಳ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಶಾಂತ್ ಎಸ್., ನವಾಜ್, ಶೈಲಾ ನೀತಾ ಡಿ ಸೋಜಾ, ರಿತೇಶ್ ಅಂಚನ್, ವಿದ್ಯಾ, ಶ್ರೀಧರ ಪಂಜ , ಮೊಹಮ್ಮದ್ ಮುಸ್ತಾಪ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ, ತಾಲೂಕು ಪಂಚಾಯತ್‌ ವ್ಯವಸ್ಥಾಪಕಿ ಸುವರ್ಣಾ ಹೆಗಡೆ, ವಿಷಯ ನಿರ್ವಾಹಕ ಆರೀಸ್‌ ಹಾಗೂ ತಾಲೂಕು ಐಇಸಿ ಸಂಯೋಜಕಿ ನಿಶ್ಮಿತಾ ಬಿ. ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು