8:18 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಪ್ರಾಣಿಪ್ರಿಯ ತೌಸೀಫ್ ಅಹಮದ್‌ ಅವರಿಗೆ 2024ನೇ ಸಾಲಿನ ಇಂಟರ್ ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪುರಸ್ಕಾರ

05/06/2024, 17:44

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಮೂಲದ ಎಂಬಿಎ ಪದವೀಧರರು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಿಯಾಗಿರುವ ತೌಸೀಫ್ ಅಹಮದ್ ಅವರು ಅವರು ಪ್ರಾಣಿಪ್ರಿಯರಾಗಿದ್ದು, ಕಳೆದ 14 ವರ್ಷಗಳಿಂದ ಮಂಗಳೂರು ನಗರದಲ್ಲಿ ಬೀದಿಯ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ. ಮೇ 28ರಂದು ಮುಂಬೈನಲ್ಲಿ ನಡೆದ ಇಂಟರ್’ನ್ಯಾಶನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 10 ನಲ್ಲಿ “2024ನೇ ಸಾಲಿನ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ಯಾರವೆಟ್ ತರಬೇತಿ ಪಡೆದ ತೌಸೀಫ್, ತಮ್ಮ ಜೀವನದ ಉದ್ದೇಶವೇ ಪ್ರಾಣಿರಕ್ಷಣೆ ಎಂದು ನಂಬಿದ್ದು, ಇದುವರೆಗೆ 18,000ಕ್ಕೂ ಹೆಚ್ಚು ಪ್ರಾಣಿಗಳನ್ನು, 6,000ಕ್ಕೂ ಹೆಚ್ಚು ಹಾವುಗಳು ಮತ್ತು ಇತರ ಕಾಡುಪ್ರಾಣಿಗಳನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಪುನರ್ವಸತಿಗೊಳಿಸಿದ್ದಾರೆ. ಎನ್‌ಜಿಒ ತಂಡ ಅಥವಾ ಆಂಬುಲೆನ್ಸ್ ಇಲ್ಲದಿದ್ದರೂ, ಒಬ್ಬಂಟಿಯಾಗಿ ಈ ಮೌನ ಪ್ರಾಣಿಗಳ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.


ಪ್ರಸ್ತುತ, ತೌಸೀಫ್ ಬೀದಿಯಲ್ಲಿ ಬದುಕಲು ಅಸಮರ್ಥ ಪ್ರಾಣಿಗಳಿಗೆ ಆಶ್ರಯ ಕಟ್ಟುವ ಉದ್ದೇಶದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮ ಸಮುದಾಯದಲ್ಲಿ ತಮ್ಮ ಜೀವನವನ್ನು ನಿರಂತರವಾಗಿ ಈ ನೈತಿಕ ಕಾರ್ಯಗಳಿಗೆ ಮೀಸಲಿಟ್ಟ ಇಂತಹ ವ್ಯಕ್ತಿಗಳ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು