4:46 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಪ್ರಾಣಿಪ್ರಿಯ ತೌಸೀಫ್ ಅಹಮದ್‌ ಅವರಿಗೆ 2024ನೇ ಸಾಲಿನ ಇಂಟರ್ ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪುರಸ್ಕಾರ

05/06/2024, 17:44

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಮೂಲದ ಎಂಬಿಎ ಪದವೀಧರರು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಿಯಾಗಿರುವ ತೌಸೀಫ್ ಅಹಮದ್ ಅವರು ಅವರು ಪ್ರಾಣಿಪ್ರಿಯರಾಗಿದ್ದು, ಕಳೆದ 14 ವರ್ಷಗಳಿಂದ ಮಂಗಳೂರು ನಗರದಲ್ಲಿ ಬೀದಿಯ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ. ಮೇ 28ರಂದು ಮುಂಬೈನಲ್ಲಿ ನಡೆದ ಇಂಟರ್’ನ್ಯಾಶನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 10 ನಲ್ಲಿ “2024ನೇ ಸಾಲಿನ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ಯಾರವೆಟ್ ತರಬೇತಿ ಪಡೆದ ತೌಸೀಫ್, ತಮ್ಮ ಜೀವನದ ಉದ್ದೇಶವೇ ಪ್ರಾಣಿರಕ್ಷಣೆ ಎಂದು ನಂಬಿದ್ದು, ಇದುವರೆಗೆ 18,000ಕ್ಕೂ ಹೆಚ್ಚು ಪ್ರಾಣಿಗಳನ್ನು, 6,000ಕ್ಕೂ ಹೆಚ್ಚು ಹಾವುಗಳು ಮತ್ತು ಇತರ ಕಾಡುಪ್ರಾಣಿಗಳನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಪುನರ್ವಸತಿಗೊಳಿಸಿದ್ದಾರೆ. ಎನ್‌ಜಿಒ ತಂಡ ಅಥವಾ ಆಂಬುಲೆನ್ಸ್ ಇಲ್ಲದಿದ್ದರೂ, ಒಬ್ಬಂಟಿಯಾಗಿ ಈ ಮೌನ ಪ್ರಾಣಿಗಳ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.


ಪ್ರಸ್ತುತ, ತೌಸೀಫ್ ಬೀದಿಯಲ್ಲಿ ಬದುಕಲು ಅಸಮರ್ಥ ಪ್ರಾಣಿಗಳಿಗೆ ಆಶ್ರಯ ಕಟ್ಟುವ ಉದ್ದೇಶದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮ ಸಮುದಾಯದಲ್ಲಿ ತಮ್ಮ ಜೀವನವನ್ನು ನಿರಂತರವಾಗಿ ಈ ನೈತಿಕ ಕಾರ್ಯಗಳಿಗೆ ಮೀಸಲಿಟ್ಟ ಇಂತಹ ವ್ಯಕ್ತಿಗಳ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು