1:59 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಪ್ರಾಣಿಪ್ರಿಯ ತೌಸೀಫ್ ಅಹಮದ್‌ ಅವರಿಗೆ 2024ನೇ ಸಾಲಿನ ಇಂಟರ್ ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪುರಸ್ಕಾರ

05/06/2024, 17:44

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಮೂಲದ ಎಂಬಿಎ ಪದವೀಧರರು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಿಯಾಗಿರುವ ತೌಸೀಫ್ ಅಹಮದ್ ಅವರು ಅವರು ಪ್ರಾಣಿಪ್ರಿಯರಾಗಿದ್ದು, ಕಳೆದ 14 ವರ್ಷಗಳಿಂದ ಮಂಗಳೂರು ನಗರದಲ್ಲಿ ಬೀದಿಯ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ. ಮೇ 28ರಂದು ಮುಂಬೈನಲ್ಲಿ ನಡೆದ ಇಂಟರ್’ನ್ಯಾಶನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 10 ನಲ್ಲಿ “2024ನೇ ಸಾಲಿನ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ಯಾರವೆಟ್ ತರಬೇತಿ ಪಡೆದ ತೌಸೀಫ್, ತಮ್ಮ ಜೀವನದ ಉದ್ದೇಶವೇ ಪ್ರಾಣಿರಕ್ಷಣೆ ಎಂದು ನಂಬಿದ್ದು, ಇದುವರೆಗೆ 18,000ಕ್ಕೂ ಹೆಚ್ಚು ಪ್ರಾಣಿಗಳನ್ನು, 6,000ಕ್ಕೂ ಹೆಚ್ಚು ಹಾವುಗಳು ಮತ್ತು ಇತರ ಕಾಡುಪ್ರಾಣಿಗಳನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಪುನರ್ವಸತಿಗೊಳಿಸಿದ್ದಾರೆ. ಎನ್‌ಜಿಒ ತಂಡ ಅಥವಾ ಆಂಬುಲೆನ್ಸ್ ಇಲ್ಲದಿದ್ದರೂ, ಒಬ್ಬಂಟಿಯಾಗಿ ಈ ಮೌನ ಪ್ರಾಣಿಗಳ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.


ಪ್ರಸ್ತುತ, ತೌಸೀಫ್ ಬೀದಿಯಲ್ಲಿ ಬದುಕಲು ಅಸಮರ್ಥ ಪ್ರಾಣಿಗಳಿಗೆ ಆಶ್ರಯ ಕಟ್ಟುವ ಉದ್ದೇಶದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮ ಸಮುದಾಯದಲ್ಲಿ ತಮ್ಮ ಜೀವನವನ್ನು ನಿರಂತರವಾಗಿ ಈ ನೈತಿಕ ಕಾರ್ಯಗಳಿಗೆ ಮೀಸಲಿಟ್ಟ ಇಂತಹ ವ್ಯಕ್ತಿಗಳ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು