5:50 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪ್ರಾಣಿಪ್ರಿಯ ತೌಸೀಫ್ ಅಹಮದ್‌ ಅವರಿಗೆ 2024ನೇ ಸಾಲಿನ ಇಂಟರ್ ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪುರಸ್ಕಾರ

05/06/2024, 17:44

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಮೂಲದ ಎಂಬಿಎ ಪದವೀಧರರು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಿಯಾಗಿರುವ ತೌಸೀಫ್ ಅಹಮದ್ ಅವರು ಅವರು ಪ್ರಾಣಿಪ್ರಿಯರಾಗಿದ್ದು, ಕಳೆದ 14 ವರ್ಷಗಳಿಂದ ಮಂಗಳೂರು ನಗರದಲ್ಲಿ ಬೀದಿಯ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ. ಮೇ 28ರಂದು ಮುಂಬೈನಲ್ಲಿ ನಡೆದ ಇಂಟರ್’ನ್ಯಾಶನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 10 ನಲ್ಲಿ “2024ನೇ ಸಾಲಿನ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ಯಾರವೆಟ್ ತರಬೇತಿ ಪಡೆದ ತೌಸೀಫ್, ತಮ್ಮ ಜೀವನದ ಉದ್ದೇಶವೇ ಪ್ರಾಣಿರಕ್ಷಣೆ ಎಂದು ನಂಬಿದ್ದು, ಇದುವರೆಗೆ 18,000ಕ್ಕೂ ಹೆಚ್ಚು ಪ್ರಾಣಿಗಳನ್ನು, 6,000ಕ್ಕೂ ಹೆಚ್ಚು ಹಾವುಗಳು ಮತ್ತು ಇತರ ಕಾಡುಪ್ರಾಣಿಗಳನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಪುನರ್ವಸತಿಗೊಳಿಸಿದ್ದಾರೆ. ಎನ್‌ಜಿಒ ತಂಡ ಅಥವಾ ಆಂಬುಲೆನ್ಸ್ ಇಲ್ಲದಿದ್ದರೂ, ಒಬ್ಬಂಟಿಯಾಗಿ ಈ ಮೌನ ಪ್ರಾಣಿಗಳ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.


ಪ್ರಸ್ತುತ, ತೌಸೀಫ್ ಬೀದಿಯಲ್ಲಿ ಬದುಕಲು ಅಸಮರ್ಥ ಪ್ರಾಣಿಗಳಿಗೆ ಆಶ್ರಯ ಕಟ್ಟುವ ಉದ್ದೇಶದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮ ಸಮುದಾಯದಲ್ಲಿ ತಮ್ಮ ಜೀವನವನ್ನು ನಿರಂತರವಾಗಿ ಈ ನೈತಿಕ ಕಾರ್ಯಗಳಿಗೆ ಮೀಸಲಿಟ್ಟ ಇಂತಹ ವ್ಯಕ್ತಿಗಳ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು