2:06 PM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಪ್ರಾಣಿಪ್ರಿಯ ತೌಸೀಫ್ ಅಹಮದ್‌ ಅವರಿಗೆ 2024ನೇ ಸಾಲಿನ ಇಂಟರ್ ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪುರಸ್ಕಾರ

05/06/2024, 17:44

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಮೂಲದ ಎಂಬಿಎ ಪದವೀಧರರು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಿಯಾಗಿರುವ ತೌಸೀಫ್ ಅಹಮದ್ ಅವರು ಅವರು ಪ್ರಾಣಿಪ್ರಿಯರಾಗಿದ್ದು, ಕಳೆದ 14 ವರ್ಷಗಳಿಂದ ಮಂಗಳೂರು ನಗರದಲ್ಲಿ ಬೀದಿಯ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ. ಮೇ 28ರಂದು ಮುಂಬೈನಲ್ಲಿ ನಡೆದ ಇಂಟರ್’ನ್ಯಾಶನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 10 ನಲ್ಲಿ “2024ನೇ ಸಾಲಿನ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ” ಎಂಬ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ಯಾರವೆಟ್ ತರಬೇತಿ ಪಡೆದ ತೌಸೀಫ್, ತಮ್ಮ ಜೀವನದ ಉದ್ದೇಶವೇ ಪ್ರಾಣಿರಕ್ಷಣೆ ಎಂದು ನಂಬಿದ್ದು, ಇದುವರೆಗೆ 18,000ಕ್ಕೂ ಹೆಚ್ಚು ಪ್ರಾಣಿಗಳನ್ನು, 6,000ಕ್ಕೂ ಹೆಚ್ಚು ಹಾವುಗಳು ಮತ್ತು ಇತರ ಕಾಡುಪ್ರಾಣಿಗಳನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಪುನರ್ವಸತಿಗೊಳಿಸಿದ್ದಾರೆ. ಎನ್‌ಜಿಒ ತಂಡ ಅಥವಾ ಆಂಬುಲೆನ್ಸ್ ಇಲ್ಲದಿದ್ದರೂ, ಒಬ್ಬಂಟಿಯಾಗಿ ಈ ಮೌನ ಪ್ರಾಣಿಗಳ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.


ಪ್ರಸ್ತುತ, ತೌಸೀಫ್ ಬೀದಿಯಲ್ಲಿ ಬದುಕಲು ಅಸಮರ್ಥ ಪ್ರಾಣಿಗಳಿಗೆ ಆಶ್ರಯ ಕಟ್ಟುವ ಉದ್ದೇಶದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮ ಸಮುದಾಯದಲ್ಲಿ ತಮ್ಮ ಜೀವನವನ್ನು ನಿರಂತರವಾಗಿ ಈ ನೈತಿಕ ಕಾರ್ಯಗಳಿಗೆ ಮೀಸಲಿಟ್ಟ ಇಂತಹ ವ್ಯಕ್ತಿಗಳ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು