2:09 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಅನಿಶ್ಚಿತತೆಗೆ ಕೊನೆಗೂ ತೆರೆ: ಲ್ಯಾಂಡ್ ಲಿಂಕ್ ಟೌನ್ ಶಿಪ್ ನಿಂದ ಸರಕಾರಿ ಬಸ್ ಓಡಾಟ ಆರಂಭ; ಖಾಸಗಿ ಲಾಬಿಯಿಂದ ಹಿಂದೆ ಸರಿದರೇ ಶಾಸಕರು ?

29/09/2021, 13:14

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಲ್ಯಾಂಡ್ ಲಿಂಕ್ಸ್ ಬಡಾವಣೆಯಿಂದ ಬಜಾಲ್ ಪಡ್ಪುವಿಗೆ ನೂತನ ಸರಕಾರಿ ಸಿಟಿ ಬಸ್  ಸೇವೆ ಬುಧವಾರ ಬೆಳಗ್ಗೆ ಅಧಿಕೃತವಾಗಿ ಉದ್ಘಾಟನೆಗೊಳ್ಳುವ ಮೂಲಕ ಬಸ್ ಬರುತ್ತಾ? ಇಲ್ವಾ? ಎಂಬ ಅನಿಶ್ಚಿತತೆಗೆ ಬ್ರೇಕ್ ಬಿದ್ದಿದೆ.

ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬಡಾವಣೆಗೆ ಆಗಮಿಸಿ ಬಸ್ ಸಂಚಾರವನ್ನು ಉದ್ಘಾಟಿಸಿದರು. ಆ ಮೂಲಕ ಬಸ್ ಸಂಚಾರಕ್ಕೆ ಕೊನೇ ಕ್ಷಣದಲ್ಲಿ ಒದಗಿದ್ದ ಆತಂಕವನ್ನು ದೂರ ಮಾಡಿದರು.

ಬದ್ಧತೆ ಪ್ರದರ್ಶಿಸಿದ ಶಾಸಕರನ್ನು ಸ್ಥಳೀಯ ನಿವಾಸಿಗಳು ಆಭಿನಂದಿಸಿದರು. 

ಸರಕಾರಿ ಸಿಟಿ ಬಸ್ ಪ್ರಾಯೋಗಿಕ ಸಂಚಾರ ಸೋಮವಾರ ನಡೆದಿತ್ತು. ಬಳಿಕ ಮಂಗಳವಾರ ಅಧಿಕೃತ ಉದ್ಘಾಟನೆ ಎಂದು ತಿಳಿಸಲಾಗಿತ್ತು. ಆದರೆ ಮಂಗಳವಾರ ಅದು ನೆರವೇರಲಿಲ್ಲ. ಮತ್ತೆ ಬುಧವಾರ ಉದ್ಘಾಟನೆ ಎಂದು ಹೇಳಲಾಗಿತ್ತು. ಆದರೆ ಮಂಗಳವಾರ ಸಂಜೆಯ ಹೊತ್ತಿಗೆ ಸರಕಾರಿ
ಬಸ್ ಬರೋಲ್ಲ ಎಂಬ ಸಂದೇಶ ಬಂತು.

ಖಾಸಗಿ ಲಾಬಿಗೆ ನಮ್ಮ ಜನಪ್ರತಿನಿಧಿಗಳು ಮಣಿದರು ಎಂಬ ಆರೋಪ ಕೇಳಿ ಬಂತು. ಕೆಸ್ಸಾರ್ಟಿಸಿಯಲ್ಲಿ ವಿಚಾರಿಸಿದರೆ, ಟೆಕ್ನಿಕಲ್ ಪ್ರಾಬ್ಲೆಂ ಸದ್ಯ ಆರಂಭಿಸಲಾಗುವುದಿಲ್ಲ ಎಂಬ ಉತ್ತರ ಬಂತು. ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿ ಅವರು ಖಾಸಗಿ ಬಸ್ ಪರ ಲಾಬಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಲಾರಂಭಿಸಿತು. ಇದರ ವಿರುದ್ಧ ಹಕ್ಕೊತ್ತಾಯ ಮಂಡಿಸಲಾಯಿತು. ಜತೆಗೆ ಪ್ರತಿಭಟನೆಗೂ ಇಲ್ಲಿನ ನಿವಾಸಿಗಳು ಸಿದ್ಧತೆ ನಡೆಸಿದರು. ಇವೆಲ್ಲದರ ಫಲಶ್ರುತಿ ಎನ್ನುವಂತೆ ಬಸ್ ಉದ್ಘಾಟನೆ ನಡೆಸುವುದನ್ನು ಖಾತ್ರಿಪಡಿಸುವ ಅಧಿಕೃತ ಪ್ರಕಟಣೆ ಮಂಗಳವಾರ ರಾತ್ರಿ ವೇಳೆ ಹೊರಬಿತ್ತು. ಅದರಂತೆ ಬುಧವಾರ(ಇಂದು) ಬೆಳಗ್ಗೆ ಶಾಸಕರು ಬಸ್ ಸಂಚಾರವನ್ನು ಉದ್ಘಾಟಿಸಿದರು. ಆದರೆ, ಇನ್ನೂ ಅನಿಶ್ಚಿತತೆ ಇದೆ.

ಖಾಸಗಿ ಲಾಬಿ ಮತ್ತೆ ಮುಂದುವರಿದರೆ ಈ ಬಸ್ ಸೇವೆ ಮತ್ತೆ ಯಾವಾಗ ಸ್ಥಗಿತಗೊಳ್ಳುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೆಎಸ್ಸಾರ್ಟಿಸಿ ಎಂಬ ಅರೆ ಸರಕಾರಿ ಸಂಸ್ಥೆಯು ಪೂರ್ತಿಯಾಗಿ ಸ್ಥಳೀಯ ಶಾಸಕರು, ಸಂಸದರನ್ನು ಅವಲಂಬಿಸಿ ಕಾರ್ಯನಿರ್ವಹಿಸುತ್ತಿದೆ. ಯಾವನಾದರು ಒಬ್ಬ ಶಾಸಕ ಬೇಡ ಅಂದ ತಕ್ಷಣ ತಾಂತ್ರಿಕ ಸಮಸ್ಯೆ, ನಷ್ಟ ಮುಂತಾದ ಕಾರಣಗಳನ್ನು

ಕೊಟ್ಟು ಬಸ್ ಸಂಚಾರವನ್ನು ನಿಲ್ಲಿಸಿ ಬಿಡುವ ಬೆನ್ನೆಲುಬಿಲ್ಲದ ಅಧಿಕಾರಿಗಳೇ ಹೆಚ್ಚು. ಕೆಲವು ರೂಟ್ ನಲ್ಲಿ ಇಂತಹ ಘಟನೆ ಈ ಹಿಂದೆಯೂ ನಡೆದಿದೆ. ಯಾವುದಕ್ಕೂ ಲ್ಯಾಂಡ್ ಲಿಂಕ್ ನಿವಾಸಿಗಳು ಒಂದು ರಾಜಕೀಯ ಪಕ್ಷಕ್ಕೆ ಅಂಟಿಕೊಂಡು ಕಣ್ಮುಚ್ಚಿ ವ್ಯವಹರಿಸದೆ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಇತ್ತೀಚಿನ ಸುದ್ದಿ

ಜಾಹೀರಾತು