9:33 PM Tuesday15 - April 2025
ಬ್ರೇಕಿಂಗ್ ನ್ಯೂಸ್
ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:…

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು