10:43 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

02/11/2024, 16:23

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.
ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು