4:38 AM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಅಂಕಪಟ್ಟಿ ಸಂಬಂಧಿಸಿದಂತೆ ಕಳೆದ ತಿಂಗಳೇ ಮನವಿ ಸಲ್ಲಿಸಿದ್ದೇವೆ; ಎಬಿವಿಪಿ ಗೂಂಡಾಗಿರಿ ಖಂಡನೀಯ: ಎನ್ ಎಸ್ ಯುಐ

16/11/2024, 11:32

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಅಂಕಪಟ್ಟಿ ಸಂಬಂಧಿಸಿದಂತೆ ಎನ್ ಎಸ್ ಯುಐ ಉಳ್ಳಾಲ ತಾಲೂಕು ಸಮಿತಿಯು ಕಳೆದ ತಿಂಗಳು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಉನ್ನತ ಶಿಕ್ಷಣ ಸಚಿವರನ್ನು‌ ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ‌ ಮಾಡಿದ್ದು, ಸ್ಪೀಕರ್ ಖಾದರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವೇ ಪರಿಹರಿಸುವ ಭರವಸೆ ನೀಡಿದ್ದಾರೆ.
ಆದರೆ ಎಬಿವಿಪಿ ಸಂಘಟನೆ ಇಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆ ನಡೆಸಿ ಕೆಲ ಎಬಿವಿಪಿ ನಾಯಕರು ಗೂಂಡಾಗಿರಿ ಮಾಡಿ ವಿಶ್ವವಿದ್ಯಾನಿಲಯದ ಗಾಜನ್ನು ಪುಡಿ ಮಾಡಿದ್ದಾರೆ.
ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಪ್ರತಿಭಟಿಸುವುದು ಪ್ರತಿ ವಿದ್ಯಾರ್ಥಿ ಸಂಘಟನೆಗಳ ಹಕ್ಕಾಗಿದೆ, ಇದಕ್ಕೆ ನಮ್ಮ ಬೆಂಬಲವೂ ಕೂಡ ಇದೆ, ಆದರೆ ಬೇಜವಾಬ್ದಾರಿಯಿಂದ ಕೆಲ ಗೂಂಡಾಗಿಯಂತೆ ವರ್ತಿಸಿ ವಿಶ್ವವಿದ್ಯಾನಿಲಯದ ಸೊತ್ತಿಗೆ ಹಾನಿ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿ ‌ಮಂಗಳೂರು‌ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯಲ್ಲಿ ತೀವ್ರವಾಗಿ ಖಂಡಿಸಿ ಹಾನಿ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಸವಾದ್ ಸುಳ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು