12:22 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ

31/05/2021, 18:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ 

ಈ ಬಾರಿ ಜಾತ್ರೆಯನ್ನು ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲೇ ಆಚರಿಸುವಂತೆ ಮಹಾ ಸ್ವಾಮೀಜಿ ಮನವಿ ಮಾಡಿದ್ದಾರೆ.

ಕೋವಿಡ್ 19 ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಮಹಾಸ್ವಾಮೀಜಿ ವೀರಭದ್ರ ಮಹಾ ಶಿವಾಚಾರ್ಯರು ಜಾತ್ರೆ ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲಿ ದೇವರನ್ನು ನೆನೆದು ಪೂಜ್ಯರನ್ನು ಸ್ಮರಿಸಿ ಹಬ್ಬ ಆಚರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಕುರಿತು ಸರಕಾರದ ನಿಯಮಗಳನ್ನು ಪಾಲಿಸಬೇಕು, ಸಾಮಾಜಿಕ ಅಂತರ ಕಾಪಾಡುವುದರ ಜತೆ ಮುಖಕ್ಕೆ ಮಾಸ್ಕ್ ಧರಿಸಿ ನಿಮ್ಮ ಜೀವನವನ್ನು ರಕ್ಷಿಸಿಕೊಳ್ಳಿ ಎಂದು ಮಹಾಸ್ವಾಮೀಜಿ ಭಕ್ತ ಜನತೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ಸುಕ್ಷೇತ್ರ ಅಂಕಲಿ ಮಠ ಕರ್ನಾಟಕದಲ್ಲಿ 

ಬಹಳಷ್ಟು ಪ್ರಖ್ಯಾತಿ ಹೊಂದಿರುವ ಕ್ಷೇತ್ರವಾಗಿದೆ. ಪೂಜ್ಯ ನಿರುಪಾದಿ ಮಹಾಸ್ವಾಮಿಗಳು, ಅಡವಿ ಸಿದ್ದರು ಮಹಾಸ್ವಾಮಿಗಳು ಮಠಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಪ್ರತಿವರ್ಷವೂ ಮಹಾರಾಷ್ಟ್ರ, ಆಂಧ್ರ ಹಾಗೂ ಹೊರ ದೇಶಗಳಿಂದ ಭಕ್ತರು ದೇವರ ಹಾಗೂ ಗುರುವಿನ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಎಲ್ಲವೂ ಭಣಭ಼ಣ.

ಇತ್ತೀಚಿನ ಸುದ್ದಿ

ಜಾಹೀರಾತು