12:05 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಅನ್ನಭಾಗ್ಯದ ತುತ್ತು ಅನ್ಯರ ಪಾಲಾಗುತ್ತಿದೆ: 1 ಟನ್ ಅಕ್ಕಿ ವಶ; ಅಕ್ರಮ ಬಯಲಿಗೆಳೆದ ರಿಪೋರ್ಟರ್ ಕರ್ನಾಟಕ ವರದಿ

05/06/2021, 14:48

ಮಾಯಪ್ಪ ಪಾಟ್ಲು ಲೋಖಂಡೆ ವಿಜಯಪುರ

info.reporterkarnataka@gmail.com

ವಿಜಯಪುರ ತಾಲೂಕಿನ ಮಖಣಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರನಾಳದಲ್ಲಿ ಇಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1 ಟನ್ ಅನ್ನಭಾಗ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಟಾಂಟಾಂ ವಾಹನದಲ್ಲಿ ಅನ್ನಭಾಗ್ಯಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಕ್ಕಿ ಶಿರನಾಳ ನ್ಯಾಯಬೆಲೆ ಅಂಗಡಿಗೆ ಸೇರಿದ್ದು ಎನ್ನಲಾಗಿದೆ. ಈ ಪ್ರದೇಶವು ತಿಡಗುಂದಿ ಉಪ ಠಾಣೆ ವ್ಯಾಪ್ತಿಗೆ ಬರುತ್ತದೆ. ರಿಪೋರ್ಟರ್ ಕರ್ನಾಟಕದ ವಿಜಯಪುರ ತಾಲೂಕು ವರದಿಗಾರ ಮಾಯಪ್ಪ ಪಾಟ್ಲು ಲೋಖಂಡೆ ಅವರು ಸ್ಥಳೀಯರ ನೆರವಿನಿಂದ ಈ ಕಾರ್ಯಾಚರಣೆ ನಡೆಸಿ ಅಕ್ಕಿಯನ್ನು ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಾಯಪ್ಪ ಅವರು ಟಾಂಟಾಂ ಚಾಲಕನನ್ನು ವಿಚಾರಿಸಿದಾಗ ಅಕ್ಕಿಯನ್ನು ಶಿರನಾಳ ರೇಶನ್ ಅಂಗಡಿಯಿಂದ ತಂದಿರುವುದಾಗಿ ತಿಳಿಸಿದ್ದಾರೆ. ಘಟನೆಯ ಕುರಿತು ಮಾಯಪ್ಪ

ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರಿಗೆ ತಿಳಿಸಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಉಪ ನಿರ್ದೇಶಕ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಸಚಿವರು

ಆದೇಶಿಸಿದ್ದಾರೆ. ಆಹಾರ ನಿರೀಕ್ಷಕರು ಈಗಾಗಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಅಕ್ಕಿಯನ್ನು ವಿಜಯಪುರ ಪಟ್ಟಣಕ್ಕೆ ಸಾಗಿಸಲಾಗುತ್ತಿತ್ತು. ಅಕ್ಕಿಯ ಚೀಲದಲ್ಲಿ ಅನ್ನಭಾಗ್ಯ ಸೀಲ್ ಇದೆ.

ಸಾಮಾಜಿಕ ಕಾರ್ಯಕರ್ತರು ಆಗಿರುವ ಮಾಯಪ್ಪ ಅವರ ತಾಯಿ 
ಗಂಗೂಬಾಯಿ  ಪಾಟ್ಲು ಲೋಖಂಡೆ ಅವರು ಮಖಣಾಪೂರ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದಲ್ಲಿ ಬಡವರಿಗೆ ಸೇರಿದ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ದಿನ ಕಳೆದಂತೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಅನ್ನಭಾಗ್ಯದ ಅಕ್ಕಿಯನ್ನು ಕದ್ದು ಖಾಸಗಿ ಗೋದಾಮಿಗೆ ಕೊಂಡೋಗಿ ಅಲ್ಲಿ ಅದನ್ನು ಬೇರೆ ಚೀಲಕ್ಕೆ ತುಂಬಿಸಿ ಮಾರಾಟ ಮಾಡುವ ಜಾಲ ಇಡೀ ರಾಜ್ಯದಲ್ಲಿ ಹಬ್ಬಿದೆ.

ಇತ್ತೀಚಿನ ಸುದ್ದಿ

ಜಾಹೀರಾತು