7:43 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ

25/09/2024, 19:29

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಅನ್ನ ಹಾಕಿದ ಮನೆ ಮಾಲಿಕನ ಮನೆಗೆ ಕನ್ನ ಹಾಕಿದ ಕಳ್ಳನೊಬ್ಬ ಮಾಲಿಕನ ಮನೆಯ ಬೀರುವಿನಲ್ಲಿದ್ದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ, ಬಾಳೆಹೊನ್ನೂರು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಕುಂಸಿ ಮೂಲದ ರವಿ ಬಿನ್ ತಿಮ್ಮಪ್ಪ ಎಂಬಾತ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿರುವ ಆರೋಪಿಯಾಗಿದ್ದಾನೆ. ಹೇರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಬ್ಳಿಯ ತಿಮ್ಮಪ್ಪಗೌಡ ಎಂಬುವವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಆರೋಪಿ ರವಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದ ಸುಮಾರು 8 ಗ್ರಾಂ ತೂಕದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ ಬಚ್ಚಿಟ್ಟಿದ್ದ. ಆರೋಪಿಯ ನಡತೆಯಿಂದ ಅನುಮಾನಗೊಂಡ ಮಾಲಿಕ ತಿಮ್ಮಪ್ಪಗೌಡ ಬಾಳೆಹೊನ್ನೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಕಾರ್ಯ ಪ್ರವೃತ್ತರಾದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಕ್ರೈಂ ಎಸ್ಐ ಅಭಿಷೇಕ್ ಆರೋಪಿಯನ್ನು ಬಂಧಿಸಿದ್ದಲ್ಲದೆ. ತಡರಾತ್ರಿ 2 ಘಂಟೆಯವರೆಗೆ ವಿಚಾರಣೆ ನಡೆಸಿ ಮಾಲಿಕರ ತಿಮ್ಮಪ್ಪಗೌಡರ ಮನೆಯ ಹಿಂಬಾಗದ ಕೊಟ್ಟಿಗೆಯ ಮಣ್ಣಿನ ಇಟ್ಟಿಗೆಗಳ ನಡುವೆ ಆರೋಪಿ ಬಚ್ಚಿಟ್ಟಿದ್ದ 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಅನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ರವಿ ತಡ ರಾತ್ರಿಯವರೆಗೂ ಕಳ್ಳತನ ಮಾಡಿರುವುದನ್ನು ಮುಚ್ಚಿಟ್ಟು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಪ್ರಯತ್ನಿಸಿದ್ದರೂ, ಮದ್ಯರಾತ್ರಿ 2 ಘಂಟೆಯವರೆಗೂ ಚಲಬಿಡದೆ ವಿಚಾರಣೆ ನಡೆಸಿದ ಪಿಎಸ್ಐ ರವೀಶ್, ಕ್ರೈಂ ಎಸ್ಐ ಅಭಿಷೇಕ್ ಹಾಗೂ ಸಿಬ್ಬಂದಿ ಶಂಕರ್ ಹಾಗೂ ಇತರ ಸಿಬ್ಬಂಧಿಗಳಿದ್ದ ತಂಡ ಕಳ್ಳತನ ನಡೆದ 10 ಘಂಟೆಯೊಳಗೆ ಆರೋಪಿಯನ್ನು ಕದ್ದ ಮಾಲಿನ ಸಮೇತ ಹೆಡೆ ಮುರಿ ಕಟ್ಟಿದೆ. ಕಳ್ಳತನ ಮಾಡುವವರಿಗೆ ಪೊಲೀಸರ ನಡೆ ನಡುಕಹುಟ್ಟಿಸಿದ್ದು, ಬಾಳೆಹೊನ್ನೂರು ಪೊಲೀಸರ ಈ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು