3:56 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ

01/06/2026, 15:43

ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂಬ ವರದಿಗಳು ಸಂಚಲನ ಸೃಷ್ಟಿಸಿವೆ. ಈಗಾಗಲೇ ‘ನಾವು ನಾಯಕರು’ ಎಂಬ ಸಂಘಟನೆ ಹೊಂದಿರುವ ಅವರು, ತಮ್ಮದೇ ಆದ ರಾಜಕೀಯ ಹಾದಿ ಹಿಡಿಯುವ ಸಾಧ್ಯತೆಗಳಿವೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ರಾಜ್ಯದಲ್ಲಿ ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟೀವಿ ವರದಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಬಳಿಕ ಈ ಸುದ್ದಿ ಸಂಚಲನ ಸೃಷ್ಟಿಸಿದೆ.
ಅಣ್ಣಾಮಲೈ ಈಗಾಗಲೇ ಲಾಭರಹಿತ ‘ನಾವು ನಾಯಕರು’ ಎಂಬ ಸಂಘಟನೆಯನ್ನು ಹೊಂದಿದ್ದಾರೆ. ಮುಂದಿನ 6 ತಿಂಗಳವರೆಗೆ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಯಾವುದೇ ಯೋಜನೆ ಇಲ್ಲ. ಆದರೆ ಸಮಾನ ಮನಸ್ಕ ಜನರನ್ನು ಸೇರಿಸಿಕೊಳ್ಳುವುದು, ಬಲವಾದ ಸ್ವಯಂಸೇವಕ ನೆಲೆಯನ್ನು ನಿರ್ಮಿಸುವುದು ಮತ್ತು ಅವರನ್ನು ರಾಜಕೀಯವಾಗಿ ಬೆಳೆಸುವುದು ಅವರ ಗುರಿಯಾಗಿದೆ ಎಂದು ಮೂಲಗಳು ತಿಳಿಸಿವೆ, ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅಣ್ಣಾಮಲೈ ಅವರಿಗೆ ಸ್ಫೂರ್ತಿಯಾಗಿ ಮುಂದುವರೆದಿದ್ದಾರೆ ಎಂದು ಅವು ತಿಳಿಸಿವೆ.
ಇತ್ತೀಚೆಗೆ ಸಿಬಿಎಸ್‌ಇ ತ್ರಿಭಾಷಾ ನೀತಿ ಸೇರಿ ಕೇಂದ್ರ ಸರ್ಕಾರದ ನಿಲುವನ್ನು ಅಣ್ಣಾಮಲೈ ವಿರೋಧಿಸಿದ್ದರು. ಅಲ್ಲದೆ, ತಮಿಳ್ನಾಡು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಆಗಿಂದಲೇ ಅವರ ಮುಂದಿನ ನಿಲುವು ಏನು ಎಂಬ ಪ್ರಶ್ನೆ ಉದ್ಭವಿಸಿದ್ದವು. ಬಿಜೆಪಿಯಲ್ಲಿ ಅಣ್ಣಾಮಲೈ ಅವರನ್ನು ಕಡಗಣನೆ ಮಾಡಲಾಗ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈಗ ತಮ್ಮ ಹೊಸ ಆಂದೋಲನದ ಮೂಲಕ ಬಿಜೆಪಿಗೆ ಶಾಕ್ ಕೊಡಲು ಅಣ್ಣಾಮಲೈ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನ ಸಿಎಂ ವಿಜಯ್, ಎರಡು ವರ್ಷದ ಹಿಂದೆಯಷ್ಟೇ ಹೊಸ ಪಕ್ಷ ರಚನೆ ಮಾಡಿದ್ದರು. ಎರಡು ವರ್ಷ ಪ್ರಚಾರ ನಡೆಸಿ ಸರ್ಕಾರ ರಚನೆ ಮಾಡುವಲ್ಲಿ ಸಕ್ಸಸ್ ಆಗಿದ್ದಾರೆ. ಇದೀಗ ಅದೇ ರೀತಿ ಅಣ್ಣಾಮಲೈ ಮುಂದಾದ್ರಾ ಎಂಬ ಚರ್ಚೆಗಳು ತಮಿಳುನಾಡು ರಾಜಕೀಯ ವಲಯದಲ್ಲಿ ಶುರುವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು