10:32 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು: 17 ಫ್ಲೋರ್‌ನಿಂದ ಜಿಗಿದ ಮುಲ್ತಾನಿ ಬೇಕರಿ ಮಾಲೀಕ

07/02/2026, 10:32

ಮುಂಬೈ(reporterkarnataka.com): ಬೆಂಗಳೂರು ಉದ್ಯಮಿ ಸಿಜೆ ರಾಯ್ ದುರಂತ ಅಂತ್ಯ ಹಲವರನ್ನು ಬೆಚ್ಚಿ ಬೀಳಿಸಿತ್ತು. ಎದೆಗೆ ಗುಂಡು ಹಾರಿಸಿಕೊಂಡು ಸಿಜೆ ರಾಯ್ ತಮ್ಮ ಕಚೇರಿಯಲ್ಲೇ ಸಾವೀಗೀಡಾಗಿದ್ದರು. ಈ ಘಟನೆ ಉದ್ಯಮ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಉದ್ಯಮಿ ದುರಂತ ಸಾವು ಕಂಡಿದ್ದಾರೆ. ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ ಸದರಂಗನಿ ಬದುಕು ಅಂತ್ಯಗೊಳಿಸಿದ್ದಾರೆ. ಸುನಿಲ್ ಮೋತಿಲಾಲ್ 17 ಮಹಡಿಯಿಂದ ಜಿಗುದು ಸಾವು ಕಂಡಿದ್ದಾರೆ. ಈ ಘಟನೆ ಮತ್ತೆ ಉದ್ಯಮ ಜಗತ್ತನ್ನು ಬೆಚ್ಚಿ ಬೀಳಿಸಿದೆ.
17ನೇ ಮಹಡಿ ಮೆಟ್ಟಿಲು ಮೂಲಕ ಹತ್ತಿದ ಉದ್ಯಮಿ
ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ. ಮಧ್ಯಾಹ್ನದ ಬಳಿಕ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ ಸುನಿಲ್ ಮೋತಿಲಾಲ್ ತೀವ್ರವಾಗಿ ಮಾನಸಿಕ ಒತ್ತಡದಲ್ಲಿದ್ದರು ಎಂದು ಸ್ಥಳೀಯರು ಗಮನಿಸಿದ್ದಾರೆ. ಸಾಮಾನ್ಯವಾಗಿ ಲಿಫ್ಟ್ ಮೂಲಕ ತೆರಳುತ್ತಿದ್ದ ಸುನಿಲ್ ಮೋತಿಲಾಲ್, 17 ಮಹಡಿಯನ್ನು ಮೆಟ್ಟಿಲು ಮೂಲಕ ಹತ್ತಿದ್ದಾರೆ. 17ನೇ ಮಹಡಿ ತುದಿಯಲ್ಲಿ ನಿಂತ ಮುಲ್ತಾನಿ ಬೇಕರಿ ಮಾಲೀಕನ ಪರಿಸ್ಥಿತಿ ಕಂಡು ಆತಂಕಗೊಂಡ ಇತರ ನಿವಾಸಿಗಳು ತಕ್ಷಣವೇ ಸಕ್ಯೂರಿಟಿ ಗಾರ್ಡ್‌ಗೆ ಸೂಚನೆ ನೀಡಿದ್ದಾರೆ.

*ಸ್ಥಳಕ್ಕೆ ಧಾವಿಸಿದ ಸೆಕ್ಯೂರಿಟಿ ಗಾರ್ಡ್:*
ಮಾಹಿತಿ ತಿಳಿಯುತ್ತಿದ್ದಂತೆ ಸೆಕ್ಯೂರಿಟಿ ಗಾರ್ಡ್ ಸ್ಥಳಕ್ಕೆ ಧಾವಿಸಿದ್ದಾರೆ. 17ನೇ ಮಹಡಿ ಬಳಿಕ ತೆರಳಿದ ಸೆಕ್ಯೂರಿಟಿ ಗಾರ್ಡ್ ಕೈಮುಗಿದು ಬೇಡಿಕೊಂಡಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಸತತವಾಗಿ ಮಾತುಕತೆ ನಡೆಸಿ ಮನ ಒಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುನಿಲ್ ಮೋತಿಲಾಲ್ ಮನ ಒಲಿಸಿದ ಸೆಕ್ಯೂರಿಟಿ ಗಾರ್ಡ್ ಯಶಸ್ವಿಯಾಗಿ ಉದ್ಯಮಿಯನ್ನು ಕೆಳಗೆ ಕರೆ ತರುವ ಪ್ರಯತ್ನ ಮಾಡಿದ್ದಾರೆ. ಸೆಕ್ಯೂರಿಟಿ ಗಾರ್ಡ್‌ಗೆ ಭರವಸೆ ನೀಡಿದ ಉದ್ಯಮಿ, ತಾನು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ತೀವ್ರ ಒತ್ತಡದಲ್ಲಿ ತಾನು ನಿರ್ಧಾರ ಮಾಡಿದ್ದೆ. ಇದೀಗ ಬದಲಾಯಿಸಿದ್ದೇನೆ ಎಂದಿದ್ದಾರೆ. ಸುನಿಲ್ ಮೋತಿಲಾಲ್ ಮಾತು ನಂಬಿಸಿದ ಸೆಕ್ಯೂರಿಟಿ ಗಾರ್ಡ್ ನಿಟ್ಟುಸಿರು ಬಿಟ್ಟು ಮೂರು ಫ್ಲೋರ್ ಇಳಿಯುತ್ತಿದ್ದಂತೆ ತನ್ನ ಕೀ ಮೇಲಿದೆ ತರುತ್ತೇನೆ ಎಂದು ಉದ್ಯಮಿ ಹೇಳಿದ್ದಾರೆ. ಮತ್ತೆ ಮೇಲಕ್ಕೆ ತೆರಳಿದ ಉದ್ಯಮಿ ಹಿಂದಿನಿಂದಲೇ ಸೆಕ್ಯೂರಿಟಿ ಗಾರ್ಡ್ ಕೂಡ ತೆರಳಿದ್ದಾರೆ. ಆದರೆ ಒಂದು ಒಂದೇ ಸಮನೇ ಓಡಿದ ಉದ್ಯಮಿ ರೂಫ್ ಟಾಪ್‌ ಮೇಲಿಂದ ಕೆಳಕ್ಕೆ ಜಿಗಿದಿದ್ದಾರೆ.

*ಸ್ಥಳದಲ್ಲೇ ಉದ್ಯಮಿ ಸಾವು:*
ಬರೋಬ್ಬರಿ 17ನೇ ಮಹಡಿಯಿಂದ ಕೆಳಕ್ಕೆ ಜಿಗಿದ ಉದ್ಯಮಿ ಸುನಿಲ್ ಮೋತಿಲಾಲ್ ಸ್ಥಳಕ್ಕೆ ಮೃತಪಟ್ಟಿದ್ದಾರೆ. ಇತರ ಅಪಾರ್ಟ್‌ಮೆಂಟ್ ನಿವಾಸಿಗಳು ನೋಡ ನೋಡುತ್ತಿದ್ದಂತೆ ಈ ಘಟನೆ ನಡೆದಿದೆ. ಹೀಗಾಗಿ ಹಲವರು ಬೆಚ್ಚಿ ಬಿದಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ. ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳ ಪರಿಶೀಲನೆ ಆರಂಭಿಸಿದ್ದಾರೆ.
59 ವರ್ಷದ ಉದ್ಯಮಿ ಸುನಿಲ್ ಮೋತಿಲಾಲ್ ಸಾವು ಕುಟುಂಬಸ್ಥರನ್ನು ಬೆಚ್ಚಿ ಬೀಳಿಸಿದೆ. ಮುಲ್ತಾನಿ ಬೇಕರಿ ಅತ್ಯಂತ ಜನಪ್ರಿಯ ಬೇಕರಿಯಾಗಿದ್ದು, ಉತ್ತಮ ಆದಾಯವೂ ಗಳಿಸುತ್ತಿತ್ತು. ಉದ್ಯಮವನ್ನು ಕಟ್ಟಿ ಬೆಳೆಸಿದ ಸುನಿಲ್ ಮೋತಿಲಾಲ್ ಸಾವು ಆತಂಕ ಹೆಚ್ಚಿಸಿದೆ. ಉದ್ಯಮಿಗಳು ಅತೀವ ಒತ್ತಡಲ್ಲಿ ಬದುಕು ಅಂತ್ಯಗೊಳಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ ಅನ್ನೋ ಚರ್ಚೆಗಳು ಆರಂಭಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು