7:18 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ

14/04/2025, 20:23

ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು