2:03 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ: ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

29/08/2025, 19:42

* ಸಚಿವ ಪ್ರಲ್ಹಾದ ಜೋಶಿ ಒತ್ತಾಸೆಯಂತೆ ಹೊಸ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್‌

* ಸೆಪ್ಟೆಂಬರ್‌ ತಿಂಗಳಿಂದ ಪ್ರತಿವಾರ ವಿಶೇಷ ರೈಲು ಸಂಚಾರ; ಟಿಕೆಟ್‌ ಬುಕಿಂಗ್‌ ಆರಂಭ

* ಮುಂದಿನ ದಿನಗಳಲ್ಲಿ ನಿತ್ಯ ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ

ನವದೆಹಲಿ(reporterkarnataka.com): ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ.
ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಜೋಧಪುರ್‌ ನೂತನ ರೈಲು (ಸಂಖ್ಯೆ: 07359) ಹುಬ್ಬಳ್ಳಿಯಿಂದ 7:30ಕ್ಕೆ ತೆರಳಿ BGKT (ಭಗತ ಕಿ ಕೋಟಿ)ಗೆ ಬೆಳಗ್ಗೆ 5:30ಕ್ಕೆ ತಲುಪಲಿದೆ. ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದೆ. ಸೆಪ್ಟೆಂಬರ್‌ 28ರಿಂದ ಸಂಚಾರ ಆರಂಭಿಸಲಿದೆ.

*ಟಿಕೆಟ್‌ ಬುಕಿಂಗ್‌ ಶುರು:* ನೂತನವಾಗಿ ಸಂಚಾರ ಆರಂಭವಾಗುವ ಹುಬ್ಬಳ್ಳಿ-ಜೋಧಪುರ್‌ ರೈಲ್ವೆ ಸಂಚಾರಕ್ಕೆ ಪ್ರಯಾಣಿಕರಿಂದ ಆಗಲೇ ಟಿಕೆಟ್‌ ಬುಕಿಂಗ್‌ ಸಹ ಶುರುವಾಗಿದೆ. ರೈಲ್ವೆ ಇಲಾಖೆ ಸೆಪ್ಟೆಂಬರ್‌ 28, ಅಕ್ಟೋಬರ್‌ 5, ಅಕ್ಟೋಬರ್‌ 12, ಅಕ್ಟೋಬರ್‌ 1̧9 ಅಕ್ಟೋಬರ್‌ 2ರಂದು ಪ್ರಯಾಣಕ್ಕೆ ಮುಂಗಡ ಟಿಕೆಟ್‌ ಬುಕಿಂಗ್‌ ಆರಂಭಿಸಿದೆ.

*ಹುಬ್ಬಳ್ಳಿಗರ ಬಹುದಿನದ ಬೇಡಿಕೆ ಈಡೇರಿಕೆ:* ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕ ಭಾಗದವರಿಂದ ಅನೇಕ ದಿನಗಳಿಂದಲೂ ಬಹು ಬೇಡಿಕೆಯಿತ್ತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸತತ ಪ್ರಯತ್ನದ ಫಲವಾಗಿ ಇದೀಗ ಸಾಕಾರಗೊಂಡಿದೆ.

*ಸಚಿವ ಪ್ರಲ್ಹಾದ ಜೋಶಿ ಸಾಫಲ್ಯ:* ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸೇರಿದಂತೆ ರಾಜ್ಯಕ್ಕೆ ವಿವಿಧ ರೈಲ್ವೆ ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿರುವ ಸಚಿವ ಜೋಶಿ ಅವರು, ಇದೀಗ ಹುಬ್ಬಳ್ಳಿ-ಜೋಧಪುರ್‌ ವಿಶೇಷ ರೈಲು ಸಂಚಾರ ಆರಂಭಿಸುವಲ್ಲಿ ಸಹ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಗಮನ ಸೆಳೆದು ರೈಲು ಸಂಚಾರವನ್ನು ಸಾಕಾರಗೊಳಿಸುವಲ್ಲಿ ಸಫಲರಾಗಿದ್ದಾರೆ.
ಬಹುಜನರ ಬೇಡಿಕೆಯಂತೆ ಸಂಸದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ-ಜೋಧಪುರ್‌ ರೈಲು ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿ, ನಿರಂತರವಾಗಿ ಗಮನ ಸೆಳೆಯುತ್ತಲೇ ಇದ್ದರು. ಜೋಶಿ ಅವರ ಒತ್ತಾಸೆ, ಮನವಿಗೆ ಸ್ಪಂದಿಸಿ ಸಚಿವ ಅಶ್ವಿನಿ ವೈಷ್ಣವ್‌ ಅವರು ಹುಬ್ಬಳ್ಳಿ-ಜೋಧ್‌ಪುರಕ್ಕೆ ನೇರ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾರೆ.

*ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ:* ತಮ್ಮ ಮನವಿ, ಒತ್ತಾಸೆಗೆ ಸ್ಪಂದಿಸಿ ಉತ್ತರ ಕರ್ನಾಟಕ ಭಾಗದ ಅದರಲ್ಲೂ ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ಯೋಜನೆ-ಸೌಲಭ್ಯಗಳಿಗೆ ವಿಶೇಷ ಆಸಕ್ತಿ ತೋರಿ ಅನುಮೋದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು