4:50 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ 7 ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ: ವಿಚಾರಣೆಗೆ ಹಾಜರಾದ ಕುಟುಂಬಸ್ಥರು

25/09/2025, 20:55

ಬೆಳ್ತಂಗಡಿ(reporterkarnataka.com): ದೇಶಾದ್ಯಂತ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ಪತ್ತೆಯಾದ 7 ಅಸ್ತಿಪಂಜರಗಳ ಪೈಕಿ ಮತ್ತೊಂದು ಅಸ್ಥಿಪಂಜರಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಅಸ್ಥಿಪಂಜರ ಶೋಧದ ವೇಳೆ ದೊರೆತ ಚಾಲನ ಪರವಾನಿಗೆ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತುಮಕೂರು ಜಿಲ್ಲೆಯ ಕುಟುಂಬವೊಂದಕ್ಕೆ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದ್ದಾರೆ. ಈ ಅಸ್ಥಿಪಂಜರವು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನದ್ದಾಗಿರಬಹುದು ಎಂದು ಶಂಕಿಸಲಾಗಿದೆ.
*ನಾಪತ್ತೆಯಾಗಿದ್ದ ಯುವಕನಿಗೆ ಡಿಎಲ್ ಸುಳಿವು:*
ಆದಿಶೇಷ ನಾರಾಯಣ ಎಂಬ ಈ ಯುವಕ 2013ರ ಅಕ್ಟೋಬರ್ 2 ರಿಂದ ಏಕಾಏಕಿ ನಾಪತ್ತೆಯಾಗಿದ್ದನು. ಈತ ಬೆಂಗಳೂರಿನ ಬಾರ್​ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

*ಕುಟುಂಬಸ್ಥರ ನಿರ್ಲಕ್ಷ್ಯ:* ಅಚ್ಚರಿಯೆಂದರೆ, ಆದಿಶೇಷ ನಾಪತ್ತೆಯಾದ ಸಂಬಂಧ ಆತನ ಕುಟುಂಬಸ್ಥರು ಈವರೆಗೂ ಯಾವುದೇ ಪೊಲೀಸ್ ದೂರು ಅಥವಾ ನಾಪತ್ತೆ ಪ್ರಕರಣವನ್ನು ದಾಖಲಿಸಿರಲಿಲ್ಲ.
*ಡಿಎಲ್‌ ಪತ್ತೆ:* ಬಂಗ್ಲೆಗುಡ್ಡ ಕಾಡಿನಲ್ಲಿ ಅಸ್ಥಿಪಂಜರದೊಂದಿಗೆ ದೊರೆತ ಚಾಲನ ಪರವಾನಿಗೆಯಲ್ಲಿ ಆದಿಶೇಷ ನಾರಾಯಣನ ಹೆಸರು ಇರುವುದು ಪೊಲೀಸರಿಗೆ ಪ್ರಮುಖ ಸುಳುವಾಗಿದೆ.

*ವಿಚಾರಣೆಗೆ ಆಗಮಿಸಿದ ಕುಟುಂಬಸ್ಥರು:*
ಚಾಲನ ಪರವಾನಿಗೆಯ ಮಾಹಿತಿ ಆಧರಿಸಿ ಎಸ್‌ಐಟಿ ಅಧಿಕಾರಿಗಳು ಆದಿಶೇಷ ನಾರಾಯಣನ ಕುಟುಂಬಸ್ಥರಿಗೆ ಬೆಳ್ತಂಗಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ, ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮಾ ಹಾಗೂ ಆತನ ಭಾವ ಶಿವಕುಮಾರ್ ಅವರು ವಿಚಾರಣೆಗೆ ಆಗಮಿಸಿದ್ದಾರೆ. ಕುಟುಂಬಸ್ಥರು, ಆದಿಶೇಷ ನಾರಾಯಣ ನಾಪತ್ತೆಯಾದ ನಂತರ ನಾವು ಹುಡುಕಲಿಲ್ಲ. ಅವನು ಮಾನಸಿಕವಾಗಿ ಚೆನ್ನಾಗಿದ್ದ’ ಎಂದು ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾರೆ.

*ಡಿಎನ್‌ಎ ಪರೀಕ್ಷೆಗೆ ಸೂಚನೆ:*
ಸದ್ಯಕ್ಕೆ ನಾಪತ್ತೆಯಾದ ಯುವಕ ಆದಿಶೇಷ ನಾರಾಯಣ ಮತ್ತು ಪತ್ತೆಯಾದ ಅಸ್ಥಿಪಂಜರದ ನಡುವೆ ಸಂಬಂಧವಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಸ್‌ಐಟಿ ಅಧಿಕಾರಿಗಳು ಕುಟುಂಬಸ್ಥರಿಗೆ ಡಿಎನ್‌ಎ ಪರೀಕ್ಷೆಗಾಗಿ ಮತ್ತೊಮ್ಮೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಡಿಎನ್‌ಎ ವರದಿ ಬಂದ ನಂತರವೇ ಅಸ್ಥಿಪಂಜರವು ನಾಪತ್ತೆಯಾದ ಯುವಕನದ್ದೇ ಅಥವಾ ಬೇರೆಯವರದ್ದೇ ಎಂಬುದು ಸ್ಪಷ್ಟವಾಗಲಿದೆ. ಈ ಅಸ್ಥಿಪಂಜರ ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ತಿರುವನ್ನು ನೀಡುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು