11:45 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ 7 ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ: ವಿಚಾರಣೆಗೆ ಹಾಜರಾದ ಕುಟುಂಬಸ್ಥರು

25/09/2025, 20:55

ಬೆಳ್ತಂಗಡಿ(reporterkarnataka.com): ದೇಶಾದ್ಯಂತ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ಪತ್ತೆಯಾದ 7 ಅಸ್ತಿಪಂಜರಗಳ ಪೈಕಿ ಮತ್ತೊಂದು ಅಸ್ಥಿಪಂಜರಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಅಸ್ಥಿಪಂಜರ ಶೋಧದ ವೇಳೆ ದೊರೆತ ಚಾಲನ ಪರವಾನಿಗೆ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತುಮಕೂರು ಜಿಲ್ಲೆಯ ಕುಟುಂಬವೊಂದಕ್ಕೆ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದ್ದಾರೆ. ಈ ಅಸ್ಥಿಪಂಜರವು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನದ್ದಾಗಿರಬಹುದು ಎಂದು ಶಂಕಿಸಲಾಗಿದೆ.
*ನಾಪತ್ತೆಯಾಗಿದ್ದ ಯುವಕನಿಗೆ ಡಿಎಲ್ ಸುಳಿವು:*
ಆದಿಶೇಷ ನಾರಾಯಣ ಎಂಬ ಈ ಯುವಕ 2013ರ ಅಕ್ಟೋಬರ್ 2 ರಿಂದ ಏಕಾಏಕಿ ನಾಪತ್ತೆಯಾಗಿದ್ದನು. ಈತ ಬೆಂಗಳೂರಿನ ಬಾರ್​ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

*ಕುಟುಂಬಸ್ಥರ ನಿರ್ಲಕ್ಷ್ಯ:* ಅಚ್ಚರಿಯೆಂದರೆ, ಆದಿಶೇಷ ನಾಪತ್ತೆಯಾದ ಸಂಬಂಧ ಆತನ ಕುಟುಂಬಸ್ಥರು ಈವರೆಗೂ ಯಾವುದೇ ಪೊಲೀಸ್ ದೂರು ಅಥವಾ ನಾಪತ್ತೆ ಪ್ರಕರಣವನ್ನು ದಾಖಲಿಸಿರಲಿಲ್ಲ.
*ಡಿಎಲ್‌ ಪತ್ತೆ:* ಬಂಗ್ಲೆಗುಡ್ಡ ಕಾಡಿನಲ್ಲಿ ಅಸ್ಥಿಪಂಜರದೊಂದಿಗೆ ದೊರೆತ ಚಾಲನ ಪರವಾನಿಗೆಯಲ್ಲಿ ಆದಿಶೇಷ ನಾರಾಯಣನ ಹೆಸರು ಇರುವುದು ಪೊಲೀಸರಿಗೆ ಪ್ರಮುಖ ಸುಳುವಾಗಿದೆ.

*ವಿಚಾರಣೆಗೆ ಆಗಮಿಸಿದ ಕುಟುಂಬಸ್ಥರು:*
ಚಾಲನ ಪರವಾನಿಗೆಯ ಮಾಹಿತಿ ಆಧರಿಸಿ ಎಸ್‌ಐಟಿ ಅಧಿಕಾರಿಗಳು ಆದಿಶೇಷ ನಾರಾಯಣನ ಕುಟುಂಬಸ್ಥರಿಗೆ ಬೆಳ್ತಂಗಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ, ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮಾ ಹಾಗೂ ಆತನ ಭಾವ ಶಿವಕುಮಾರ್ ಅವರು ವಿಚಾರಣೆಗೆ ಆಗಮಿಸಿದ್ದಾರೆ. ಕುಟುಂಬಸ್ಥರು, ಆದಿಶೇಷ ನಾರಾಯಣ ನಾಪತ್ತೆಯಾದ ನಂತರ ನಾವು ಹುಡುಕಲಿಲ್ಲ. ಅವನು ಮಾನಸಿಕವಾಗಿ ಚೆನ್ನಾಗಿದ್ದ’ ಎಂದು ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾರೆ.

*ಡಿಎನ್‌ಎ ಪರೀಕ್ಷೆಗೆ ಸೂಚನೆ:*
ಸದ್ಯಕ್ಕೆ ನಾಪತ್ತೆಯಾದ ಯುವಕ ಆದಿಶೇಷ ನಾರಾಯಣ ಮತ್ತು ಪತ್ತೆಯಾದ ಅಸ್ಥಿಪಂಜರದ ನಡುವೆ ಸಂಬಂಧವಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಸ್‌ಐಟಿ ಅಧಿಕಾರಿಗಳು ಕುಟುಂಬಸ್ಥರಿಗೆ ಡಿಎನ್‌ಎ ಪರೀಕ್ಷೆಗಾಗಿ ಮತ್ತೊಮ್ಮೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಡಿಎನ್‌ಎ ವರದಿ ಬಂದ ನಂತರವೇ ಅಸ್ಥಿಪಂಜರವು ನಾಪತ್ತೆಯಾದ ಯುವಕನದ್ದೇ ಅಥವಾ ಬೇರೆಯವರದ್ದೇ ಎಂಬುದು ಸ್ಪಷ್ಟವಾಗಲಿದೆ. ಈ ಅಸ್ಥಿಪಂಜರ ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ತಿರುವನ್ನು ನೀಡುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು