12:22 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹೋಟೆಲ್ ಉದ್ಯಮಕ್ಕೆ ಸರ್ಕಾರದಿಂದ ಮತ್ತೆ ಶಾಕ್: 10 ದಿನ ಗ್ಯಾಸ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

16/03/2026, 18:04

ಬೆಂಗಳೂರು(reporterkarnataka.com): ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಬಿಸಿ ಇದೀಗ ಹೋಟೆಲ್ ಉದ್ಯಮಕ್ಕೆ ತಟ್ಟಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ತೈಲ ಪೂರೈಕೆ ಕಂಪನಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಮಾತನಾಡಿದ ಅವರು, ಪರಿಸ್ಥಿತಿ ಗಂಭೀರವಾಗಿದ್ದು ಮುಂದಿನ ಒಂದು ವಾರದಿಂದ 10 ದಿನಗಳವರೆಗೆ ಹೋಟೆಲ್‌ಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

*ಸುದ್ದಿಯ ಮುಖ್ಯಾಂಶಗಳು:*

ಆದ್ಯತಾ ವಲಯಕ್ಕೆ ಪೂರೈಕೆ: ಸದ್ಯ ಲಭ್ಯವಿರುವ ಅನಿಲ ದಾಸ್ತಾನನ್ನು ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು (ಹಾಸ್ಟೆಲ್‌ಗಳು), ಇಂದಿರಾ ಕ್ಯಾಂಟೀನ್, ರೈಲ್ವೆ ಕ್ಯಾಂಟೀನ್ ಮತ್ತು ಏರ್‌ಲೈನ್ಸ್‌ಗಳಿಗೆ ಆದ್ಯತೆಯ ಮೇಲೆ ಪೂರೈಸಲು ನಿರ್ಧರಿಸಲಾಗಿದೆ.
ಎಲೆಕ್ಟ್ರಿಕ್ ಸ್ಟವ್ ಬಳಕೆಗೆ ಮನವಿ: ವಾಣಿಜ್ಯ ಸಿಲಿಂಡರ್ ಅಭಾವವಿರುವುದರಿಂದ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಸ್ಟವ್‌ಗಳನ್ನು ಬಳಸುವ ಮೂಲಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

*ಗೃಹಬಳಕೆ ಅನಿಲ ಸುರಕ್ಷಿತ:*

ಮನೆಗಳಿಗೆ ನೀಡಲಾಗುವ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಪ್ರತಿ ಕುಟುಂಬಕ್ಕೆ 25 ರಿಂದ 30 ದಿನಕ್ಕೊಮ್ಮೆ ಒಂದು ಸಿಲಿಂಡರ್ ಸಿಗುವಂತೆ ಕ್ರಮ ವಹಿಸಲಾಗಿದೆ. ಗ್ರಾಹಕರು ವಿನಾಕಾರಣ ಆತಂಕಗೊಂಡು ಡಬಲ್ ಬುಕ್ಕಿಂಗ್ ಮಾಡಬಾರದು ಎಂದು ಸಚಿವರು ತಿಳಿಸಿದ್ದಾರೆ.
ಆಟೋ ಎಲ್‌ಪಿಜಿ ಸುಗಮ: ಆಟೋರಿಕ್ಷಾಗಳಿಗೆ ಬೇಕಾಗುವ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ತೈಲ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

*ಕಾಳಸಂತೆಕೋರರಿಗೆ ಎಚ್ಚರಿಕೆ*
ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡು ವಾಣಿಜ್ಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ವಸ್ತುಗಳ ಕಾಯ್ದೆಯಡಿ ಅಂತಹ ಏಜೆನ್ಸಿಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು