5:06 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

29/06/2025, 18:06

ಬೆಂಗಳೂರು(reporterkarnataka.com): ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.
ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ” ಎಂದು ಹೇಳಿದರು.

*ಆಶೋಕ್ ಬಳಿ ನಾನು ಹೋಗಿ ಭವಿಷ್ಯ ಕೇಳುವೆ:*
ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ಛೇಡಿಸಿದರು.
ಸುರ್ಜೆವಾಲ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡುವರೇ ಎಂದು ಕೇಳಿದಾಗ, “ಹೌದು, ಅವರು ಶಾಸಕರ ಜೊತೆ ಖುದ್ದಾಗಿ ಭೇಟಿ ಮಾಡಲಿದ್ದಾರೆ. ಈ ಬಗ್ಗೆ ಅವರೇ ಶಾಸಕರಿಗೆ ತಿಳಿಸಿದ್ದಾರೆ. ನಾನು ಕೂಡ ಶಾಸಕರಿಗೆ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು