7:38 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು