10:07 PM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು