8:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು