12:33 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಅಂತರಗಂಗೆ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ: ಸಂಭ್ರಮದ ಸಮಾಪನ

11/06/2021, 07:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ ಅತಿ ಸರಳ ಹಾಗೂ ವಿಜ್ರಂಭಣೆಯಿಂದ ಜರುಗಿತು.

ಕೋವಿಡ್ 19 ಅಲೆ ಇರುವುದರಿಂದ ಸರಕಾರದ ಆದೇಶದ ಪ್ರಕಾರ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಕಡಿಮೆ ಜನರ ಮಧ್ಯೆ ಸಡಗರ ಸಂಭ್ರಮದಿಂದ ಜಾತ್ರೆ ಮಾಡಲಾಯಿತು. ಈ ಭಾಗದ ಆರಾಧ್ಯ ದೈವ ದುರ್ಗಾದೇವಿ ಜಾತ್ರೆ ವಿಶೇಷವಾಗಿ ಐದು ವರ್ಷಕ್ಕೊಮ್ಮೆ ಆಗುತ್ತದೆ. 

ಪ್ರತಿವರ್ಷ ಬೇರೆ ಬೇರೆ ಜಿಲ್ಲೆಗಳಿಂದ ಬೇರೆ ಬೇರೆ ತಾಲೂಕುಗಳಿಂದ ಭಕ್ತರು ಆಗಮಿಸುತ್ತಿದ್ದರು. ಆದರೆ ಲಾಕ್ ಡೌನ್ ಇರುವುದರಿಂದ ಭಕ್ತಾದಿಗಳಿಗೆ ದೂರದಿಂದ ಬರುವವರಿಗೆ ಮನಸ್ಸಿನಲ್ಲಿ ದೇವರನ್ನು ಪ್ರಾರ್ಥಿಸಿ ಮನೆಯಲ್ಲಿ ಜಾತ್ರೆ ಮಾಡಿ ಎಂದು ಸ್ವಾಮೀಜಿ  ತಿಳಿಸಿದ್ದರು. ಈ ಜಾತ್ರೆಯು 7 ಗ್ರಾಮಗಳ ಗೌಡರ ಬಂದಮೇಲೆ ಜಾತ್ರೆಯಂತೆ. ಬೈಲಗುಡ್ಡ, ಮೆದಿಕಲ್, ಮ್ಯಾದರಾಳ, ಅಂತರಗಂಗೆ ತಾಂಡ, ಅಂತರಗಂಗೆ, ನಾಗರಬೆಂಚಿ ಸುತ್ತಮುತ್ತಲ ಭಕ್ತಾದಿಗಳು ದುರ್ಗಾದೇವಿ ಕೃಪೆಗೆ ಪಾತ್ರರಾಗಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ.

ಅದ್ದೂರಿ ಸರಳ ರೀತಿಯ ಇಂದು ಜಾತ್ರೆ ನೆರವೇರಿತು. ಈ ಜಾತ್ರೆ ಬಳ್ಳಾರಿ ದುರ್ಗಮ್ಮ ಬಂದು ಇಲ್ಲಿ ನಡೆಸಿದ್ದಾಳೆ ಎಂದು ಮೂಲ ಇತಿಹಾಸದಲ್ಲಿ ಇದೆ. ಈ ಗುಡಿಯ ಮುಂದೆ ಬೇವಿನ ಗಿಡ 120 ವರ್ಷ ಹಳೆಯದಾಗಿದೆ.ಅಪರೂಪದ ಆ ಗಿಡವನ್ನು ದೇವಿ ಕಾಪಾಡಿಕೊಂಡು ಬಂದಿದ್ದಾಳೆಂದು ಹಿರಿಯರು ಹೇಳುತ್ತಾರೆ. ಬಳ್ಳಾರಿ ದುರ್ಗಮ್ಮ ಲಿಂಗಸುಗೂರು ಕೋರ್ಟಿನಲ್ಲಿ ಒಂದು ಕುರ್ಚಿ ದುರ್ಗಾ ಮಳೆಗಾಗಿ ಖಾಲಿ ಇದೆ ಎಂದು ಇತಿಹಾಸದಲ್ಲಿದೆ 


ಅಂತರಗಂಗೆ ಅಮರಪ್ಪ ಸಾಹುಕಾರ್ ರಾಯಚೂರಿನ ವಾಸವಾಗಿರು ಅವರು ಈಗ ನೇತಾಜಿ ಪಟೇಲ್ ಬಜಾರ್ ಬಂಗಾರದ ಅಂಗಡಿ ನಡೆಸುತ್ತಾ ಇದ್ದಾರೆ. ಅವರ ತಂದೆ ಅಮರಪ್ಪ ಸೌಕಾರ್ ದುರ್ಗಾದೇವಿ ಕನಸಿನಲ್ಲಿ ಬಂದು ನನಗೆ ಇರಲು ಗುಡಿ ಕಟ್ಟಿಸಿ ಕೊಡು ಎಂದು ಹೇಳಿ ಅದೃಶ್ಯಳಾದಳು. ದೇವಿ ಹೇಳಿದ ಪ್ರಕಾರ ಅವರು ಗುಡಿ ಕಟ್ಟಿ ಕೊಟ್ಟರು.

ಕ್ರಮೇಣ ಒಂದು ಸಮಯದಲ್ಲಿ ಅವರಿಗೆ ಆಕ್ಸಿಡೆಂಟ್ ಆದಾಗ ಸ್ಥಳದಲ್ಲಿ ಯಾರು ಇರಲಿಲ್ಲ. ಆ ವೇಳೆ ಈ ದುರ್ಗಮ್ಮ ಕರೆದುಕೊಂಡು ಆಸ್ಪತ್ರೆ ಚಿಕಿತ್ಸೆ ಬಂದು ಆರಾಮ್ ಆಗುತ್ತೆ ಏನು ಆಗುವುದಿಲ್ಲ ಎಂದು ಅದೃಶ್ಯಳಾದಳು ಎಂಬ ಐತಿಹ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು