6:55 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಅಂತರಗಂಗೆ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ: ಸಂಭ್ರಮದ ಸಮಾಪನ

11/06/2021, 07:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ ಅತಿ ಸರಳ ಹಾಗೂ ವಿಜ್ರಂಭಣೆಯಿಂದ ಜರುಗಿತು.

ಕೋವಿಡ್ 19 ಅಲೆ ಇರುವುದರಿಂದ ಸರಕಾರದ ಆದೇಶದ ಪ್ರಕಾರ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಕಡಿಮೆ ಜನರ ಮಧ್ಯೆ ಸಡಗರ ಸಂಭ್ರಮದಿಂದ ಜಾತ್ರೆ ಮಾಡಲಾಯಿತು. ಈ ಭಾಗದ ಆರಾಧ್ಯ ದೈವ ದುರ್ಗಾದೇವಿ ಜಾತ್ರೆ ವಿಶೇಷವಾಗಿ ಐದು ವರ್ಷಕ್ಕೊಮ್ಮೆ ಆಗುತ್ತದೆ. 

ಪ್ರತಿವರ್ಷ ಬೇರೆ ಬೇರೆ ಜಿಲ್ಲೆಗಳಿಂದ ಬೇರೆ ಬೇರೆ ತಾಲೂಕುಗಳಿಂದ ಭಕ್ತರು ಆಗಮಿಸುತ್ತಿದ್ದರು. ಆದರೆ ಲಾಕ್ ಡೌನ್ ಇರುವುದರಿಂದ ಭಕ್ತಾದಿಗಳಿಗೆ ದೂರದಿಂದ ಬರುವವರಿಗೆ ಮನಸ್ಸಿನಲ್ಲಿ ದೇವರನ್ನು ಪ್ರಾರ್ಥಿಸಿ ಮನೆಯಲ್ಲಿ ಜಾತ್ರೆ ಮಾಡಿ ಎಂದು ಸ್ವಾಮೀಜಿ  ತಿಳಿಸಿದ್ದರು. ಈ ಜಾತ್ರೆಯು 7 ಗ್ರಾಮಗಳ ಗೌಡರ ಬಂದಮೇಲೆ ಜಾತ್ರೆಯಂತೆ. ಬೈಲಗುಡ್ಡ, ಮೆದಿಕಲ್, ಮ್ಯಾದರಾಳ, ಅಂತರಗಂಗೆ ತಾಂಡ, ಅಂತರಗಂಗೆ, ನಾಗರಬೆಂಚಿ ಸುತ್ತಮುತ್ತಲ ಭಕ್ತಾದಿಗಳು ದುರ್ಗಾದೇವಿ ಕೃಪೆಗೆ ಪಾತ್ರರಾಗಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ.

ಅದ್ದೂರಿ ಸರಳ ರೀತಿಯ ಇಂದು ಜಾತ್ರೆ ನೆರವೇರಿತು. ಈ ಜಾತ್ರೆ ಬಳ್ಳಾರಿ ದುರ್ಗಮ್ಮ ಬಂದು ಇಲ್ಲಿ ನಡೆಸಿದ್ದಾಳೆ ಎಂದು ಮೂಲ ಇತಿಹಾಸದಲ್ಲಿ ಇದೆ. ಈ ಗುಡಿಯ ಮುಂದೆ ಬೇವಿನ ಗಿಡ 120 ವರ್ಷ ಹಳೆಯದಾಗಿದೆ.ಅಪರೂಪದ ಆ ಗಿಡವನ್ನು ದೇವಿ ಕಾಪಾಡಿಕೊಂಡು ಬಂದಿದ್ದಾಳೆಂದು ಹಿರಿಯರು ಹೇಳುತ್ತಾರೆ. ಬಳ್ಳಾರಿ ದುರ್ಗಮ್ಮ ಲಿಂಗಸುಗೂರು ಕೋರ್ಟಿನಲ್ಲಿ ಒಂದು ಕುರ್ಚಿ ದುರ್ಗಾ ಮಳೆಗಾಗಿ ಖಾಲಿ ಇದೆ ಎಂದು ಇತಿಹಾಸದಲ್ಲಿದೆ 


ಅಂತರಗಂಗೆ ಅಮರಪ್ಪ ಸಾಹುಕಾರ್ ರಾಯಚೂರಿನ ವಾಸವಾಗಿರು ಅವರು ಈಗ ನೇತಾಜಿ ಪಟೇಲ್ ಬಜಾರ್ ಬಂಗಾರದ ಅಂಗಡಿ ನಡೆಸುತ್ತಾ ಇದ್ದಾರೆ. ಅವರ ತಂದೆ ಅಮರಪ್ಪ ಸೌಕಾರ್ ದುರ್ಗಾದೇವಿ ಕನಸಿನಲ್ಲಿ ಬಂದು ನನಗೆ ಇರಲು ಗುಡಿ ಕಟ್ಟಿಸಿ ಕೊಡು ಎಂದು ಹೇಳಿ ಅದೃಶ್ಯಳಾದಳು. ದೇವಿ ಹೇಳಿದ ಪ್ರಕಾರ ಅವರು ಗುಡಿ ಕಟ್ಟಿ ಕೊಟ್ಟರು.

ಕ್ರಮೇಣ ಒಂದು ಸಮಯದಲ್ಲಿ ಅವರಿಗೆ ಆಕ್ಸಿಡೆಂಟ್ ಆದಾಗ ಸ್ಥಳದಲ್ಲಿ ಯಾರು ಇರಲಿಲ್ಲ. ಆ ವೇಳೆ ಈ ದುರ್ಗಮ್ಮ ಕರೆದುಕೊಂಡು ಆಸ್ಪತ್ರೆ ಚಿಕಿತ್ಸೆ ಬಂದು ಆರಾಮ್ ಆಗುತ್ತೆ ಏನು ಆಗುವುದಿಲ್ಲ ಎಂದು ಅದೃಶ್ಯಳಾದಳು ಎಂಬ ಐತಿಹ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು